ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ದಕ್ಷಿಣ ಪ್ರದೇಶದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ ಕಾರ್ಯಕ್ಷಮತೆ ಕುರಿತಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಸಭೆ ನಡೆಸಿದರು.
ಸಭೆಯಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವಲ್ಲಿ ಗ್ರಾಮೀಣ ಬ್ಯಾಂಕ್ಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿದರು. ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಎಂ.ಎಸ್.ಎಂ.ಇ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಕರ್ನಾಟಕದ 35 ಲಕ್ಷ ಎಂಎಸ್ಎಂಇಗಳ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಪೀಣ್ಯಾ ಕೈಗಾರಿಕೆಗಳ ಒಕ್ಕೂಟ ಸುಮಾರು 7400 ಎಂಎಸ್ಎಂಇ ಸದಸ್ಯತ್ವವನ್ನು ಹೊಂದಿರುವ ಅತಿದೊಡ್ಡ ಸೂಕ್ಷ್ಮ, ಸಣ್ಣ, ಮಧ್ಯಮಗಳ ಸಂಘಗಳಲ್ಲಿ ಒಂದಾಗಿದೆ. ಇದಕ್ಕೂ ಮೊದಲು ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಖಾಸಗಿ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…