ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

June 28, 2025
8:29 PM

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ.  ಈ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ  ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ.  ಬೆಳೆಗಳಿಗೆ  ಸೂಕ್ತ ಮಾರುಕಟ್ಟೆ , ತನ್ನ ಮೌಲ್ಯವರ್ಥಿತ ಬೆಲೆ  ಸಿಕ್ಕರೆ  ರೈತರಿಗೆ ಅನುಕೂಲವಾಗಲಿದೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಹೇಳಿದರು.

Advertisement

ಎಂ ಎಸ್ ಎಂ ಇ ದಿನಾಚರಣೆ ಹಿನ್ನೆಲೆಯಲ್ಲಿ   ಬಳ್ಳಾರಿಯಲ್ಲಿ ಕೃಷಿ ಕ್ಷೇತ್ರದಲ್ಲಿ  ಎಂ ಎಸ್ ಎಂ ಇ ಗಳ  ಪಾತ್ರ  ಕುರಿತ ಒಂದು  ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಲೆಕ್ಕ ಪರಿಶೋಧಕ ಹಾಗೂ ಎಂ ಎಸ್ ಎಂ ಇ ದಿನಾಚರಣೆ  ಕಾರ್ಯಕ್ರಮದ ಸಂಚಾಲಕ ಸಿರಿಗೇರಿ  ಪೊನ್ನರಾಜ ಮಾತನಾಡಿ, ದೇಶದಲ್ಲಿ  ಕಾರ್ಪೋರೇಟ್  ವಲಯದ ಉದ್ಯಮಗಳು ಶೇಕಡ 30ರಷ್ಟು ಉದ್ಯೋಗ ನೀಡಿದರೆ, ಸಣ್ಣ, ಅತಿ ಸಣ್ಣ, ಮಧ್ಯಮ ವಲಯದ ಕೈಗಾರಿಕೆಗಳು ಹಾಗೂ ಕೃಷಿ ಕ್ಷೇತ್ರದಲ್ಲಿ ಶೇಕಡ 70ರಷ್ಟು ಉದ್ಯೋಗ ನೀಡುತ್ತಿದೆ ಎಂದರು.

ಕೃಷಿ ಪ್ರಾಧ್ಯಾಪಕ ಡಾ. ಬಿ.ಕೆ. ರಮೇಶ್ ಮಾತನಾಡಿ, ದೇಶೀಯ ಪಶು ತಳಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಅದರಲ್ಲೂ ಮುರ್ರಾ ತಳಿಗಳ ಅಭಿವೃದ್ಧಿಯಿಂದ ಹಾಲಿನ  ಉತ್ಪಾದನೆ ಹಾಗೂ ಹಾಲಿನ ಇನ್ನಿತರ ಉತ್ಪನ್ನಗಳು   ಹೆಚ್ಚಲಿವೆ. ಇದರಿಂದ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ  ಲೆಕ್ಕ ಪರಿಶೋಧನಾ ಸಂಸ್ಥೆಯ ಅಧ್ಯಕ್ಷ ಗಜರಾಜ, ಪದಾಧಿಕಾರಿಗಳಾದ ವಿಶ್ವನಾಥ್ ಆಚಾರಿ, ಸಪ್ನಾಪ್ರಿಯಾ,  ಶರಣ್ ಪಾಟೀಲ್,  ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group