ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ಬೆಳೆಗಳಿಗೆ ಸೂಕ್ತ ಮಾರುಕಟ್ಟೆ , ತನ್ನ ಮೌಲ್ಯವರ್ಥಿತ ಬೆಲೆ ಸಿಕ್ಕರೆ ರೈತರಿಗೆ ಅನುಕೂಲವಾಗಲಿದೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಹೇಳಿದರು.
ಎಂ ಎಸ್ ಎಂ ಇ ದಿನಾಚರಣೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಕೃಷಿ ಕ್ಷೇತ್ರದಲ್ಲಿ ಎಂ ಎಸ್ ಎಂ ಇ ಗಳ ಪಾತ್ರ ಕುರಿತ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಲೆಕ್ಕ ಪರಿಶೋಧಕ ಹಾಗೂ ಎಂ ಎಸ್ ಎಂ ಇ ದಿನಾಚರಣೆ ಕಾರ್ಯಕ್ರಮದ ಸಂಚಾಲಕ ಸಿರಿಗೇರಿ ಪೊನ್ನರಾಜ ಮಾತನಾಡಿ, ದೇಶದಲ್ಲಿ ಕಾರ್ಪೋರೇಟ್ ವಲಯದ ಉದ್ಯಮಗಳು ಶೇಕಡ 30ರಷ್ಟು ಉದ್ಯೋಗ ನೀಡಿದರೆ, ಸಣ್ಣ, ಅತಿ ಸಣ್ಣ, ಮಧ್ಯಮ ವಲಯದ ಕೈಗಾರಿಕೆಗಳು ಹಾಗೂ ಕೃಷಿ ಕ್ಷೇತ್ರದಲ್ಲಿ ಶೇಕಡ 70ರಷ್ಟು ಉದ್ಯೋಗ ನೀಡುತ್ತಿದೆ ಎಂದರು.
ಕೃಷಿ ಪ್ರಾಧ್ಯಾಪಕ ಡಾ. ಬಿ.ಕೆ. ರಮೇಶ್ ಮಾತನಾಡಿ, ದೇಶೀಯ ಪಶು ತಳಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಅದರಲ್ಲೂ ಮುರ್ರಾ ತಳಿಗಳ ಅಭಿವೃದ್ಧಿಯಿಂದ ಹಾಲಿನ ಉತ್ಪಾದನೆ ಹಾಗೂ ಹಾಲಿನ ಇನ್ನಿತರ ಉತ್ಪನ್ನಗಳು ಹೆಚ್ಚಲಿವೆ. ಇದರಿಂದ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಲೆಕ್ಕ ಪರಿಶೋಧನಾ ಸಂಸ್ಥೆಯ ಅಧ್ಯಕ್ಷ ಗಜರಾಜ, ಪದಾಧಿಕಾರಿಗಳಾದ ವಿಶ್ವನಾಥ್ ಆಚಾರಿ, ಸಪ್ನಾಪ್ರಿಯಾ, ಶರಣ್ ಪಾಟೀಲ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…