Advertisement
MIRROR FOCUS

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

Share

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ.  ಈ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ  ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ.  ಬೆಳೆಗಳಿಗೆ  ಸೂಕ್ತ ಮಾರುಕಟ್ಟೆ , ತನ್ನ ಮೌಲ್ಯವರ್ಥಿತ ಬೆಲೆ  ಸಿಕ್ಕರೆ  ರೈತರಿಗೆ ಅನುಕೂಲವಾಗಲಿದೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಹೇಳಿದರು.

ಎಂ ಎಸ್ ಎಂ ಇ ದಿನಾಚರಣೆ ಹಿನ್ನೆಲೆಯಲ್ಲಿ   ಬಳ್ಳಾರಿಯಲ್ಲಿ ಕೃಷಿ ಕ್ಷೇತ್ರದಲ್ಲಿ  ಎಂ ಎಸ್ ಎಂ ಇ ಗಳ  ಪಾತ್ರ  ಕುರಿತ ಒಂದು  ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಲೆಕ್ಕ ಪರಿಶೋಧಕ ಹಾಗೂ ಎಂ ಎಸ್ ಎಂ ಇ ದಿನಾಚರಣೆ  ಕಾರ್ಯಕ್ರಮದ ಸಂಚಾಲಕ ಸಿರಿಗೇರಿ  ಪೊನ್ನರಾಜ ಮಾತನಾಡಿ, ದೇಶದಲ್ಲಿ  ಕಾರ್ಪೋರೇಟ್  ವಲಯದ ಉದ್ಯಮಗಳು ಶೇಕಡ 30ರಷ್ಟು ಉದ್ಯೋಗ ನೀಡಿದರೆ, ಸಣ್ಣ, ಅತಿ ಸಣ್ಣ, ಮಧ್ಯಮ ವಲಯದ ಕೈಗಾರಿಕೆಗಳು ಹಾಗೂ ಕೃಷಿ ಕ್ಷೇತ್ರದಲ್ಲಿ ಶೇಕಡ 70ರಷ್ಟು ಉದ್ಯೋಗ ನೀಡುತ್ತಿದೆ ಎಂದರು.

ಕೃಷಿ ಪ್ರಾಧ್ಯಾಪಕ ಡಾ. ಬಿ.ಕೆ. ರಮೇಶ್ ಮಾತನಾಡಿ, ದೇಶೀಯ ಪಶು ತಳಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಅದರಲ್ಲೂ ಮುರ್ರಾ ತಳಿಗಳ ಅಭಿವೃದ್ಧಿಯಿಂದ ಹಾಲಿನ  ಉತ್ಪಾದನೆ ಹಾಗೂ ಹಾಲಿನ ಇನ್ನಿತರ ಉತ್ಪನ್ನಗಳು   ಹೆಚ್ಚಲಿವೆ. ಇದರಿಂದ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ  ಲೆಕ್ಕ ಪರಿಶೋಧನಾ ಸಂಸ್ಥೆಯ ಅಧ್ಯಕ್ಷ ಗಜರಾಜ, ಪದಾಧಿಕಾರಿಗಳಾದ ವಿಶ್ವನಾಥ್ ಆಚಾರಿ, ಸಪ್ನಾಪ್ರಿಯಾ,  ಶರಣ್ ಪಾಟೀಲ್,  ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago