ಈ ಬಾರಿ ಮಳೆ ಕೈಕೊಟ್ಟಿತು, ಕಾವೇರಿ ಸೇರಿದಂತೆ ಜೀವನದಿಗಳೂ ಈಗಲೇ ಬತ್ತುವ ಸೂಚನೆ ನೀಡಿದೆ. ಇದೆಲ್ಲದರ ನಡುವೆ ತಮಿಳುನಾಡು ನೀರು ಕೇಳುತ್ತಿದೆ. ಈಗ ನಮ್ಮ ನೆಲದ ರೈತರು ಬೆಳೆ ಬೆಳೆದು ನೀರಿಲ್ಲದೆ ಪರದಾಟ ನಡೆಸುತ್ತಿದ್ದಾರೆ. ಬೆಳೆ ನೀರಿಲ್ಲದೆ ಒಣಗುತ್ತಿದೆ…!.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬೆಳೆದು ನಿಂತಿರುವ ಪೈರುಗಳು ಒಣಗಲು ಆರಂಭವಾಗಿದೆ. ಬೆಳೆದು ನಿಂತಿರುವ ಭತ್ತ, ಕಬ್ಬು ಬೆಳೆಗೆ ನವೆಂಬರ್ ಅಂತ್ಯದವರೆಗೆ ನೀರಿನ ಅವಶ್ಯಕತೆ ಇದೆ. ಈಗಲೇ ನೀರಿನ ಕೊರತೆ ಕಂಡುಬಂದು ಒಣಗಲಾರಂಭಿಸಿದೆ. ಭತ್ತಕ್ಕಿಂತಲೂ ಕಬ್ಬಿಗೆ ಹೆಚ್ಚು ನೀರಿನ ಅವಶ್ಯಕತೆ ಇದೆ. ನೀರಿಲ್ಲದಿರುವುದರಿಂದ ಬೆಳೆಗಳಿಗೆ ನೀರು ಸಿಗುವ ಸಾಧ್ಯತೆಗಳ ಕ್ಷೀಣಿಸಿವೆ ಈಗಿನ ಪರಿಸ್ಥಿತಿಯಲ್ಲಿ ಬೆಳೆ ನಷ್ಟವಾಗುವುದು ಖಚಿತವಾಗಿದೆ. ಇದುವರೆಗೂ ಪರ್ಯಾಯ ನೀರಿನ ಸೌಲಭ್ಯ ಪಡೆಯಲಾಗದೆ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಟ ನಡೆಸುತ್ತಿದ್ದಾರೆ.1 ಬೆಳೆಗಳ ಉಳಿವಿಗೆ 10 ರಿಂದ 13 ಟಿಎಂಸಿ ನೀರು ಬೇಕು 11,59,607 ಹೆಕ್ಟೇರ್ ಪ್ರದೇಶದಲ್ಲಿರುವ ಬೆಳೆಗೆ ಈಗ ನೀರಿನ ಆವಶ್ಯಕತೆ ಇದೆ . ಈ ನಡುವೆಯೇ ತಮಿಳುನಾಡಿನ ನೀರು ಬಿಡಬೇಕಾದ ಸ್ಥಿತಿ ಬಂದಿದೆ.
ಈಗಿರುವ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರು ಕೊಡುವುದಕ್ಕೆ ಸರ್ಕಾರದಿಂದ ಸಾಧ್ಯವೇ ಇಲ್ಲ. ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಿಕೊಳ್ಳಬೇಕಾದರೆ 21 ಟಿಎಂಸಿಯಷ್ಟು ನೀರಿನ ಅವಶ್ಯಕತೆ ಇದೆ ಸರ್ಕಾರವು ಕಾವೇರಿ ನೀರನ್ನು ಹರಿಯಬಿಟ್ಟು ಕುಳಿತಿದೆ. ರೈತರು ಸಂಕಷ್ಟದ ಉರಿಯಲ್ಲಿ ಬೇಯುತ್ತಿದ್ದಾರೆ ಎಂದು ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಗಡಿ ತಾಲೂಕಿನಲ್ಲಿ ಮಳೆ ಕೊರತೆಯಿಂದ ರಾಗಿ ಬೆಳೆ ಒಣಗುತ್ತಿದ್ದು, ಮಳೆಗಾಗಿ ರೈತರು ದೇವರ ಮೊರೆ ಹೋಗಿದ್ದಾರೆ. ಕೈಗೆ ಬಂದ ಬೆಳೆ ನಾಶವಾಗುವ ಸ್ಥಿತಿಯಲ್ಲಿದೆ. ಮಳೆರಾಯ ಕೃಪೆ ತೋರಿದರೆ ಮಾತ್ರ ಬೆಳೆ ಕೈಗೆಟುಕಲಿದೆ ಎಂದು ರೈತರು ಅಸಾಹಯಕತೆ ವ್ಯಕ್ತಪಡಿಸಿದ್ದಾರೆ.ಕೂಡಲೇ ಸರ್ಕಾರವು ರಾಗಿಗೆ ಬೆಂಬಲ ಬೆಲೆ ಘೋಷಣೆ ಮತ್ತು ಒಂದು ಎಕರೆಗೆ 2 ಲಕ್ಷ ಬೆಳೆ ವಿಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…