ಈ ಬಾರಿ ಮಳೆ ಕೈಕೊಟ್ಟಿತು, ಕಾವೇರಿ ಸೇರಿದಂತೆ ಜೀವನದಿಗಳೂ ಈಗಲೇ ಬತ್ತುವ ಸೂಚನೆ ನೀಡಿದೆ. ಇದೆಲ್ಲದರ ನಡುವೆ ತಮಿಳುನಾಡು ನೀರು ಕೇಳುತ್ತಿದೆ. ಈಗ ನಮ್ಮ ನೆಲದ ರೈತರು ಬೆಳೆ ಬೆಳೆದು ನೀರಿಲ್ಲದೆ ಪರದಾಟ ನಡೆಸುತ್ತಿದ್ದಾರೆ. ಬೆಳೆ ನೀರಿಲ್ಲದೆ ಒಣಗುತ್ತಿದೆ…!.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬೆಳೆದು ನಿಂತಿರುವ ಪೈರುಗಳು ಒಣಗಲು ಆರಂಭವಾಗಿದೆ. ಬೆಳೆದು ನಿಂತಿರುವ ಭತ್ತ, ಕಬ್ಬು ಬೆಳೆಗೆ ನವೆಂಬರ್ ಅಂತ್ಯದವರೆಗೆ ನೀರಿನ ಅವಶ್ಯಕತೆ ಇದೆ. ಈಗಲೇ ನೀರಿನ ಕೊರತೆ ಕಂಡುಬಂದು ಒಣಗಲಾರಂಭಿಸಿದೆ. ಭತ್ತಕ್ಕಿಂತಲೂ ಕಬ್ಬಿಗೆ ಹೆಚ್ಚು ನೀರಿನ ಅವಶ್ಯಕತೆ ಇದೆ. ನೀರಿಲ್ಲದಿರುವುದರಿಂದ ಬೆಳೆಗಳಿಗೆ ನೀರು ಸಿಗುವ ಸಾಧ್ಯತೆಗಳ ಕ್ಷೀಣಿಸಿವೆ ಈಗಿನ ಪರಿಸ್ಥಿತಿಯಲ್ಲಿ ಬೆಳೆ ನಷ್ಟವಾಗುವುದು ಖಚಿತವಾಗಿದೆ. ಇದುವರೆಗೂ ಪರ್ಯಾಯ ನೀರಿನ ಸೌಲಭ್ಯ ಪಡೆಯಲಾಗದೆ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಟ ನಡೆಸುತ್ತಿದ್ದಾರೆ.1 ಬೆಳೆಗಳ ಉಳಿವಿಗೆ 10 ರಿಂದ 13 ಟಿಎಂಸಿ ನೀರು ಬೇಕು 11,59,607 ಹೆಕ್ಟೇರ್ ಪ್ರದೇಶದಲ್ಲಿರುವ ಬೆಳೆಗೆ ಈಗ ನೀರಿನ ಆವಶ್ಯಕತೆ ಇದೆ . ಈ ನಡುವೆಯೇ ತಮಿಳುನಾಡಿನ ನೀರು ಬಿಡಬೇಕಾದ ಸ್ಥಿತಿ ಬಂದಿದೆ.
ಈಗಿರುವ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರು ಕೊಡುವುದಕ್ಕೆ ಸರ್ಕಾರದಿಂದ ಸಾಧ್ಯವೇ ಇಲ್ಲ. ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಿಕೊಳ್ಳಬೇಕಾದರೆ 21 ಟಿಎಂಸಿಯಷ್ಟು ನೀರಿನ ಅವಶ್ಯಕತೆ ಇದೆ ಸರ್ಕಾರವು ಕಾವೇರಿ ನೀರನ್ನು ಹರಿಯಬಿಟ್ಟು ಕುಳಿತಿದೆ. ರೈತರು ಸಂಕಷ್ಟದ ಉರಿಯಲ್ಲಿ ಬೇಯುತ್ತಿದ್ದಾರೆ ಎಂದು ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಗಡಿ ತಾಲೂಕಿನಲ್ಲಿ ಮಳೆ ಕೊರತೆಯಿಂದ ರಾಗಿ ಬೆಳೆ ಒಣಗುತ್ತಿದ್ದು, ಮಳೆಗಾಗಿ ರೈತರು ದೇವರ ಮೊರೆ ಹೋಗಿದ್ದಾರೆ. ಕೈಗೆ ಬಂದ ಬೆಳೆ ನಾಶವಾಗುವ ಸ್ಥಿತಿಯಲ್ಲಿದೆ. ಮಳೆರಾಯ ಕೃಪೆ ತೋರಿದರೆ ಮಾತ್ರ ಬೆಳೆ ಕೈಗೆಟುಕಲಿದೆ ಎಂದು ರೈತರು ಅಸಾಹಯಕತೆ ವ್ಯಕ್ತಪಡಿಸಿದ್ದಾರೆ.ಕೂಡಲೇ ಸರ್ಕಾರವು ರಾಗಿಗೆ ಬೆಂಬಲ ಬೆಲೆ ಘೋಷಣೆ ಮತ್ತು ಒಂದು ಎಕರೆಗೆ 2 ಲಕ್ಷ ಬೆಳೆ ವಿಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…