Advertisement
MIRROR FOCUS

ಬೆಳೆದ ಬೆಳೆಗಳಿಗೇ ನೀರಿಲ್ಲ…! | ಕಾವೇರಿ ತಟದಲ್ಲಿ ರೈತರ ಪರಿಸ್ಥಿತಿ….| ಕೆಲವು ಕಡೆ ದೇವರ ಮೊರೆ |

Share

ಈ ಬಾರಿ ಮಳೆ ಕೈಕೊಟ್ಟಿತು, ಕಾವೇರಿ ಸೇರಿದಂತೆ ಜೀವನದಿಗಳೂ ಈಗಲೇ ಬತ್ತುವ ಸೂಚನೆ ನೀಡಿದೆ. ಇದೆಲ್ಲದರ ನಡುವೆ ತಮಿಳುನಾಡು ನೀರು ಕೇಳುತ್ತಿದೆ. ಈಗ ನಮ್ಮ ನೆಲದ ರೈತರು ಬೆಳೆ ಬೆಳೆದು ನೀರಿಲ್ಲದೆ ಪರದಾಟ ನಡೆಸುತ್ತಿದ್ದಾರೆ. ಬೆಳೆ ನೀರಿಲ್ಲದೆ ಒಣಗುತ್ತಿದೆ…!.

Advertisement
Advertisement

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬೆಳೆದು ನಿಂತಿರುವ ಪೈರುಗಳು ಒಣಗಲು ಆರಂಭವಾಗಿದೆ. ಬೆಳೆದು ನಿಂತಿರುವ ಭತ್ತ, ಕಬ್ಬು ಬೆಳೆಗೆ ನವೆಂಬರ್ ಅಂತ್ಯದವರೆಗೆ ನೀರಿನ ಅವಶ್ಯಕತೆ ಇದೆ. ಈಗಲೇ ನೀರಿನ ಕೊರತೆ ಕಂಡುಬಂದು  ಒಣಗಲಾರಂಭಿಸಿದೆ. ಭತ್ತಕ್ಕಿಂತಲೂ ಕಬ್ಬಿಗೆ ಹೆಚ್ಚು ನೀರಿನ ಅವಶ್ಯಕತೆ ಇದೆ. ನೀರಿಲ್ಲದಿರುವುದರಿಂದ ಬೆಳೆಗಳಿಗೆ ನೀರು ಸಿಗುವ ಸಾಧ್ಯತೆಗಳ ಕ್ಷೀಣಿಸಿವೆ ಈಗಿನ ಪರಿಸ್ಥಿತಿಯಲ್ಲಿ ಬೆಳೆ ನಷ್ಟವಾಗುವುದು ಖಚಿತವಾಗಿದೆ. ಇದುವರೆಗೂ ಪರ್ಯಾಯ ನೀರಿನ ಸೌಲಭ್ಯ ಪಡೆಯಲಾಗದೆ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಟ ನಡೆಸುತ್ತಿದ್ದಾರೆ.1 ಬೆಳೆಗಳ ಉಳಿವಿಗೆ 10 ರಿಂದ 13 ಟಿಎಂಸಿ ನೀರು ಬೇಕು 11,59,607 ಹೆಕ್ಟೇರ್ ಪ್ರದೇಶದಲ್ಲಿರುವ ಬೆಳೆಗೆ ಈಗ ನೀರಿನ ಆವಶ್ಯಕತೆ ಇದೆ . ಈ ನಡುವೆಯೇ ತಮಿಳುನಾಡಿನ ನೀರು ಬಿಡಬೇಕಾದ ಸ್ಥಿತಿ ಬಂದಿದೆ.

Advertisement

ಈಗಿರುವ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರು ಕೊಡುವುದಕ್ಕೆ ಸರ್ಕಾರದಿಂದ ಸಾಧ್ಯವೇ ಇಲ್ಲ. ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಿಕೊಳ್ಳಬೇಕಾದರೆ 21 ಟಿಎಂಸಿಯಷ್ಟು ನೀರಿನ ಅವಶ್ಯಕತೆ ಇದೆ ಸರ್ಕಾರವು ಕಾವೇರಿ ನೀರನ್ನು ಹರಿಯಬಿಟ್ಟು  ಕುಳಿತಿದೆ. ರೈತರು ಸಂಕಷ್ಟದ ಉರಿಯಲ್ಲಿ ಬೇಯುತ್ತಿದ್ದಾರೆ ಎಂದು ರೈತ ಮುಖಂಡ  ಕೆ.ಎಸ್.ನಂಜುಂಡೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಗಡಿ ತಾಲೂಕಿನಲ್ಲಿ ಮಳೆ ಕೊರತೆಯಿಂದ ರಾಗಿ ಬೆಳೆ ಒಣಗುತ್ತಿದ್ದು, ಮಳೆಗಾಗಿ ರೈತರು ದೇವರ ಮೊರೆ ಹೋಗಿದ್ದಾರೆ. ಕೈಗೆ ಬಂದ ಬೆಳೆ ನಾಶವಾಗುವ ಸ್ಥಿತಿಯಲ್ಲಿದೆ. ಮಳೆರಾಯ ಕೃಪೆ ತೋರಿದರೆ ಮಾತ್ರ ಬೆಳೆ ಕೈಗೆಟುಕಲಿದೆ ಎಂದು ರೈತರು ಅಸಾಹಯಕತೆ ವ್ಯಕ್ತಪಡಿಸಿದ್ದಾರೆ.ಕೂಡಲೇ ಸರ್ಕಾರವು ರಾಗಿಗೆ ಬೆಂಬಲ ಬೆಲೆ ಘೋಷಣೆ ಮತ್ತು ಒಂದು ಎಕರೆಗೆ 2 ಲಕ್ಷ ಬೆಳೆ ವಿಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

3 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

11 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

14 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago