ಹಸಿರು ಕ್ರಾಂತಿಯ’ ಪಿತಾಮಹನೆಂದು ಮತ್ತು ವಿಶ್ವಸಂಸ್ಥೆಯಿಂದ ಪರಿಸರ `ಆರ್ಥಿಕ ಸಿದ್ಧಾಂತದ ಪಿತಾಮಹ’ ಎಂದು ಶ್ಲಾಘಿಸಲ್ಪಟ್ಟ ಖ್ಯಾತ ಕೃಷಿ ವಿಜ್ಞಾನಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪ್ರೊ.ಎಂ.ಎಸ್ ಸ್ವಾಮಿನಾಥನ್ (98) ಅವರು ಚೆನ್ನೈನಲ್ಲಿ ನಿಧನರಾಗಿದ್ದಾರೆ.
*1965 ರಲ್ಲಿ ಹಸಿರುಕ್ರಾಂತಿ (Green Revolution) ಯೋಜನೆ ಜಾರಿಗೆ ಬಂದದ್ದು ಎಲ್ಲರಿಗೂ ತಿಳಿದ ವಿಷಯವಾಗಿರುತ್ತದೆ.
*1965 ರಿಂದ ಇಲ್ಲಿಯವರೆಗೂ ಹಸಿರುಕ್ರಾಂತಿ ಯಶಸ್ಸಿಗೆ ಹೈಬ್ರಿಡ್ ಬೀಜಗಳು ಮತ್ತು ರಾಸಾಯನಿಕ ಗೊಬ್ಬರ ಮಾತ್ರ ಮೂಲ ಕಾರಣ ಹಾಗು ಇವುಗಳನ್ನು ತರುವಲ್ಲಿ ಕೃಷಿ ವಿ.ವಿ ಗಳು,ವಿಜ್ಞಾನಿಗಳ ಪಾತ್ರದ ಬಗ್ಗೆ ಮಾತ್ರ ವ್ಯಾಪಕವಾಗಿ ಬಿಂಬಿಸಲಾಗುತ್ತಿದೆ.ಆದರೆ ಈ ಬೀಜಗಳು ಮತ್ತು ಗೊಬ್ಬರಗಳು ಮಾತ್ರ ಕಾರಣವೇ?ನೋಡೋಣ ಬನ್ನಿ.
*1965 ರಲ್ಲಿ ಭಾರತದ ಜನಸಂಖ್ಯೆ 50 ಕೋಟಿ,ಆಹಾರೋತ್ಪದಾನೆ 82 ಮಿಲಿಯನ್ ಟನ್ (MT).
*2018 ರ ಜನಸಂಖ್ಯೆ 135 ಕೋಟಿ, ಆಹಾರೋತ್ಪದಾನೆ 285 MT.03 ಪಟ್ಟು ಹೆಚ್ಚಾಗಿರುವ ಜನಸಂಖ್ಯೆಗೆ ಅನುಗುಣವಾಗಿ ಸುಮಾರು ಅಷ್ಟೇ ಅಂದರೆ 3.5ಪಟ್ಟು ಹೆಚ್ಚು ಉತ್ಪಾದನೆ ಮಾಡಲಾಗಿದೆ.
*ಭಾರತದ ಕೃಷಿ ಭೂಮಿ ಸುಮಾರು 160 ಮಿಲಿಯನ್ hectare (MH).1965 ರ ನೀರಾವರಿ ಪ್ರದೇಶ-10 MH, 2018 ರ ನೀರಾವರಿ ಪ್ರದೇಶ-60 MH.
*1965 ರಲ್ಲಿ 08 MH ಪ್ರದೇಶಕ್ಕೆ ಸರ್ಕಾರ ಕಾಲುವೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಿತು,ಈಗ ಅದು 22 MH ಪ್ರದೇಶವಾಗಿರುತ್ತದೆ.ಸುಮಾರು 03 ಪಟ್ಟು ಹೆಚ್ಚು ಪ್ರದೇಶ ನೀರಾವರಿಗೆ ಒಳಪಟ್ಟಿರುತ್ತದೆ.
*1965 ರಲ್ಲಿ ಅಂತರ್ಜಲದ(ಬೋರ್ವೇಲ್ ,ತೆರೆದ ಬಾವಿ) ಮೂಲಕ ನೀರಾವರಿ ಮಾಡುತ್ತಿದ ಪ್ರದೇಶ 01 MH ಕ್ಕಿಂತ ಕಡಿಮೆ,ಈಗ ಅದು 40 MH ಪ್ರದೇಶಕ್ಕೆ ವ್ಯಾಪಿಸಿದೆ,40 ಪಟ್ಟು ಹೆಚ್ಚಿರುತ್ತದೆ.
*160 MH ಕೃಷಿ ಭೂಮಿಯಲ್ಲಿ 60 MH ನೀರಾವರಿ ಪ್ರದೇಶ,2/3 ಕೃಷಿ ಭೂಮಿ ಮಳೆಯಾಶ್ರಿತ.ಸರ್ಕಾರ ನೀರಾವರಿ ಒದಗಿಸಿರುವುದು 22 MH, ರೈತರು ತಮ್ಮ ಸ್ವಂತ ದುಡ್ಡಿನಲ್ಲಿ ನೀರಾವರಿ ಮಾಡಿಕೊಂಡಿರುವುದು 40 MH, ಸರ್ಕಾರಗಳು ನೀರಾವರಿಗೆ ಖರ್ಚು ಮಾಡಿರುವ ಹಣಕ್ಕಿಂತ ರೈತರು ಹೆಚ್ಚು ಪಾಲು ಹಣ ಖರ್ಚು ಮಾಡಿರುತ್ತಾರೆ ಎಂಬುವುದನ್ನು ಗಮನಿಸಬೇಕು.
*1965 ರಿಂದ 2018 ರವರೆಗೆ 10 MH ನಿಂದ 60 MH ಪ್ರದೇಶ ನೀರಾವರಿಗೆ ಒಳಪಟ್ಟಿರುತ್ತದೆ, 06 ಪಟ್ಟು ಹೆಚ್ಚು ಕೃಷಿ ಭೂಮಿಗೆ ನೀರಾವರಿ ವಿಸ್ತರಿಸಲಾಗಿದೆ.
*ಈಗ ಉತ್ಪಾದನೆ ಆಗುತ್ತಿರುವ 285 MT ನಲ್ಲಿ ಭತ್ತ 110 MT,ಗೋಧಿ 100 MT.ಒಟ್ಟಾರೆ ಉತ್ಪಾದನೆಯಲ್ಲಿ ಭತ್ತ ಮತ್ತು ಗೋಧಿ ಪಾಲು ಶೇ 75%.ಭತ್ತ ಮತ್ತು ಗೋಧಿ ಉತ್ಪಾದನೆಗೆ ಬೇಕಿರುವುದು ನೀರಾವರಿ ಪ್ರದೇಶ, ಹಾಗಾದರೆ ಬೇಕಿರುವುದು ನೀರು ತಾನೆ?
*ಹಸಿರುಕ್ರಾಂತಿ ಪರಿಣಾಮ ಅಕ್ಕಿ ಮತ್ತು ಗೋಧಿ ಪ್ರತಿ ಹೆಕ್ಟೇರ್ ಗೆ ಕ್ರಮವಾಗಿ 02 ಮತ್ತು 03 ಪಟ್ಟು ಇಳುವರಿ ಹೆಚ್ಚಾಗಿರುವುದು ಸತ್ಯ.ಈ ಉತ್ಪಾದನೆ ಕೇವಲ ಬೀಜ ಮತ್ತು ಗೊಬ್ಬರದಿಂದ ಮಾತ್ರವಲ್ಲ,ಅದಕ್ಕೂ ಮಿಗಿಲಾಗಿ ಪ್ರಮುಖವಾಗಿ ಹರಿಸಿದ ನೀರಿನ ಪ್ರಮಾಣವನ್ನು ಯಾರು ಮುಚ್ಚಿಡಲು ಸಾಧ್ಯವಿಲ್ಲ.
*ಹಾಗಾದರೆ ಹೈಬ್ರಿಡ್ ಬೀಜ ಮೊಳಕೆ ಹೊಡೆಯಲು, ಗೊಬ್ಬರ ಭೂಮಿಯಲ್ಲಿ ಕರಗಲು ಹೆಚ್ಚಿನ ಪಾತ್ರ ವಹಿಸುವುದು ನೀರು ಅಲ್ಲವೇ? ಉದ್ದೇಶಪೂರಕವಾಗಿ ಈ ಸತ್ಯವನ್ನು ಮರೆಮಾಚಿ ಬರಿ ಬೀಜ ಮತ್ತು ಗೊಬ್ಬರದಿಂದ ಯಶಸ್ಸು ಸಾಧಿಸಿದ್ದೇವೆ ಎಂದು ಹೇಳುವುದು ಎಷ್ಟು ಸರಿ?ಮೂಲ ಕಾರಣ ನೀರು ತಾನೆ?
*ನಮ್ಮ ದೇಶದಲ್ಲಿ ರಾಸಾಯನಿಕ ಕೃಷಿ ಪ್ರಾರಂಭ ಮಾಡುವ ಮೊದಲು, ಅಂದರೆ 1960 ಕ್ಕೂ ಮೊದಲು, ನಮ್ಮ ಮಣ್ಣಿನಲ್ಲಿ ಸಾವಯವ ಇಂಗಾಲ ಶೇ 3% ರಷ್ಟು ಇತ್ತು. ಈಗ ಶೇ 90% ರಷ್ಟು ಕಳೆದುಕೊಂಡು ಶೇ 0.3% ಕ್ಕೆ ಬಂದಿದೆ. ಆಗ 20 ಅಡಿ ಆಳದಲ್ಲಿ ಸಿಗುತ್ತಿದ್ದ ನೀರು ಈಗ 1200 ಅಡಿಗೆ ಹೋಗಿದೆ.’ಒಂದು ದೇಶದ ಶ್ರೀಮಂತಿಕೆ ಅಲ್ಲಿನ ಭೂಮಿಯ ಮಣ್ಣನ್ನು ಅವಲಂಬಿಸಿದೆ’. ನಾವು ಭೂಮಿಗೆ ವಿಷ ಹಾಕಿ ಅಭಿವೃದ್ಧಿ ಮಾಡುತ್ತ ಇದ್ದೇವೆ ಎನ್ನುವ ಹುಚ್ಚು ಭ್ರಮೆಯಲ್ಲಿದ್ದೇವೆ.
ಪ್ರಶಾಂತ್ ಜಯರಾಮ್, ಕೃಷಿಕರು ಮತ್ತು ಕೃಷಿ ಸಲಹೆಗಾರರು, ಮೊಬೈಲ್ :9342434530
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…