ಒಂದೇ ದಿನ 3,400 ಗುಂಡಿಗಳನ್ನು ಮುಚ್ಚುವ “ವಿಶ್ವ ದಾಖಲೆ”

June 25, 2025
2:34 PM

ದೆಹಲಿ ಲೋಕೋಪಯೋಗಿ ಇಲಾಖೆ  ಮಂಗಳವಾರ ಒಂದೇ ದಿನದಲ್ಲಿ ದೆಹಲಿ ನಗರದಾದ್ಯಂತ 3,433 ಗುಂಡಿಗಳನ್ನು ದುರಸ್ತಿ ಮಾಡಿದೆ. ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದಲ್ಲಿ ಚಾಲನೆ ನೀಡಲಾಗಿತ್ತು, ಪಿಡಬ್ಲ್ಯೂಡಿ ಸಚಿವ ಪರ್ವೇಶ್ ಸಾಹಿಬ್ ಸಿಂಗ್ ಅವರು ಭಾಗವಹಿಸಿದ್ದರು.

ಒಟ್ಟು1,400 ಕಿ.ಮೀ.ಗೂ ಹೆಚ್ಚು ರಸ್ತೆಗಳಲ್ಲಿನ 3433 ಗುಂಡಿಗಳನ್ನು ಮುಚ್ಚಲಾಗಿತ್ತು. ದೆಹಲಿಯನ್ನು ಪೂರ್ವ, ದಕ್ಷಿಣ ಮತ್ತು ಉತ್ತರ ವಲಯಗಳಾಗಿ ವಿಂಗಡಿಸಿ, ಗುಣಮಟ್ಟದ ಕೆಲಸವನ್ನು ಮಾಡಲು ಯಂತ್ರೋಪಕರಣಗಳನ್ನು ಹೊಂದಿದ 200 ಕ್ಕೂ ಹೆಚ್ಚು ನಿರ್ವಹಣಾ ವ್ಯಾನ್‌ಗಳನ್ನು ನಿಯೋಜಿಸಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ. ಈ ಕಾರ್ಯಾಚರಣೆಯಲ್ಲಿ ಎಂಜಿನಿಯರ್‌ಗಳು ಮತ್ತು  ಸಿಬ್ಬಂದಿ ಸೇರಿದಂತೆ 1,000 ಕ್ಕೂ ಹೆಚ್ಚು ಸಿಬ್ಬಂದಿಗಳು ಇದ್ದರು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ದುರಸ್ತಿಗಳನ್ನು ಜಿಯೋ-ಟ್ಯಾಗ್ ಮಾಡಲಾದ, ಸಮಯ-ಮುದ್ರೆ ಮಾಡಿದ ಫೋಟೋಗಳ ಮೂಲಕ ದಾಖಲಿಸಲಾಗಿದೆ.

ಮಳೆಗಾಲಕ್ಕೆ  ಮುಂಚಿತವಾಗಿಯೇ  ಈ ಅಭಿಯಾನವು, ರಸ್ತೆ ಅಪಾಯಗಳನ್ನು ಕಡಿಮೆ ಮಾಡುವುದು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಅನುಕೂಲವಾಗಿದೆ ಎಂದು ಪಿಡಬ್ಲ್ಯೂಡಿ ಸಚಿವ ಪರ್ವೇಶ್ ಸಾಹಿಬ್ ಸಿಂಗ್ ಹೇಳಿದ್ದಾರೆ.

ಒಂದೇ ದಿನದಲ್ಲಿ 3,000 ಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚುವ ಮೂಲಕ ಲೋಕೋಪಯೋಗಿ ಇಲಾಖೆ ವಿಶ್ವ ದಾಖಲೆಗೆ ಪ್ರಯತ್ನಿಸಲಿದೆ ಎಂದು ಲೋಕೋಪಯೋಗಿ ಸಚಿವ ಪರ್ವೇಶ್ ವರ್ಮಾ ಸೋಮವಾರ ತಿಳಿಸಿದ್ದರು. ಲೋಕೋಪಯೋಗಿ ಇಲಾಖೆ ಮಳೆಗಾಲಕ್ಕೆ ಸ್ವಲ್ಪ ಮೊದಲು ತನ್ನ ವ್ಯಾಪ್ತಿಯಲ್ಲಿರುವ 1,400 ಕಿಲೋಮೀಟರ್ ರಸ್ತೆ ಜಾಲದಲ್ಲಿನ ಎಲ್ಲಾ ಗುಂಡಿಗಳನ್ನು ಗುರುತಿಸಿ ಜಿಯೋ-ಟ್ಯಾಗ್ ಮಾಡಲಾಗುತ್ತದೆ ಎಂದು ಹೇಳಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror