ಮತ್ತೆ ಮತ್ತೆ ಅಡಿಕೆ ಕಳ್ಳಸಾಗಾಣಿಕೆ…! | ಮುಂದ್ರಾ ಬಂದರಿನಲ್ಲಿ 27.81 ಮೆಟ್ರಿಕ್ ಟನ್ ಅಡಿಕೆ ವಶ |

February 29, 2024
10:11 PM
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಕಸ್ಟಮ್ಸ್‌ ಇಲಾಖೆ ಮುಂದ್ರಾ ಬಂದರಿನಲ್ಲಿ ಪತ್ತೆ ಮಾಡಿದ್ದು, ಅಡಿಕೆಯನ್ನು ವಶಕ್ಕೆ ಪಡೆದುಕೊಂಡಿದೆ.

ಗುಜರಾತ್‌ ನ ಮುಂದ್ರಾ ಬಂದರಿನ ಮೂಲಕ ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಮತ್ತೆ ತಡೆಯಾಗಿದೆ. ಕಸ್ಟಮ್ಸ್‌ ಅಧಿಕಾರಿಗಳು ಸುಮಾರು 1.15 ಕೋಟಿ ರೂಪಾಯಿ ಮೌಲ್ಯದ ಸುಮಾರು 27.81 ಮೆಟ್ರಿಕ್‌ ಟನ್‌ ಅಡಿಕೆಯನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರಾಳದ ಮಾದರಿಯ ವಸ್ತುವನ್ನು ಆಮದು ಎಂದು ನಮೂದಿಸಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗುತ್ತಿತ್ತು.

ಆಮದು ಸರಕನ್ನು ಸುಳ್ಳು ಮಾಹಿತಿಯಾಗಿ ನಮೂದು ಮಾಡಲಾಗಿತ್ತು.ಡಮಾರ್  ಎಂದು ಹೇಳಿಕೊಂಡು  ಇಂಡೋನೇಷ್ಯಾದಿಂದ ರಾಳ ಮಾದರಿಯ ಅಪರೂಪದ ವಸ್ತುವಿನ ಹೆಸರನ್ನು ನಮೂದಿಸಿ ಆಮದು ಮಾಡಲಾಗುತ್ತಿತ್ತು. ಇದು ಅಪರೂಪದ ವಸ್ತುವಾಗಿದ್ದು ಭಾರತಕ್ಕೆ ನಿಯಮಿತವಾಗಿ ಆಮದು ಮಾಡಿಕೊಳ್ಳುವುದಿಲ್ಲ. ಹೀಗಾಗಿ ಇಂಡೋನೇಷ್ಯಾದಿಂದ ಕಂಟೈನರ್‌ಗಳಲ್ಲಿ  ಮುಂದ್ರಾ ಬಂದರಿಗೆ ಬಂದಿರುವ ವಸ್ತುಗಳಲ್ಲಿ ಅಡಿಕೆ ಇರುವ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 27.81 ಮೆ.ಟನ್ ಅಡಿಕೆ ಪತ್ತೆಯಾಗಿದೆ.

ಅಡಿಕೆ ಆಮದು ಸುಂಕ ಶೇ.110 ಇರುವುದರಿಂದ ವಿದೇಶಿ ಅಡಿಕೆಯನು ಆಮದು ಮಾಡಲು ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಇದುವರೆಗೆ ಡ್ರೈ ಪ್ರುಟ್‌ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದರೆ ಈಗ ರಾಳದ ಮಾದರಿಯನ್ನು ಉಲ್ಲೇಖಿಸಲಾಗಿದೆ. ಈ  ಆರ್ಥಿಕ ವರ್ಷದಲ್ಲಿ, ಅಕ್ರಮ ಆಮದನ್ನು ತಡೆಯುವ ನಿರಂತರ ಪ್ರಯತ್ನಗಳ ಪರಿಣಾಮವಾಗಿ ರೂ.10.38 ಕೋಟಿ ಸುಂಕದ ಮೌಲ್ಯವನ್ನು ಹೊಂದಿರುವ 172.39 ಮೆಟ್ರಿಕ್‌ ಟನ್‌ಗಳಷ್ಟು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಇಲಾಖೆ ಪ್ರಕಟಣೆ ತಿಳಿಸಿದೆ.

At Mundra Port, Customs Department seized 27.81 metric tonnes of arecanut. The consignment goods were misrepresented, and an investigation is ongoing.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror