ಗುಜರಾತ್ ನ ಮುಂದ್ರಾ ಬಂದರಿನ ಮೂಲಕ ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಮತ್ತೆ ತಡೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.15 ಕೋಟಿ ರೂಪಾಯಿ ಮೌಲ್ಯದ ಸುಮಾರು 27.81 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರಾಳದ ಮಾದರಿಯ ವಸ್ತುವನ್ನು ಆಮದು ಎಂದು ನಮೂದಿಸಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗುತ್ತಿತ್ತು.
ಆಮದು ಸರಕನ್ನು ಸುಳ್ಳು ಮಾಹಿತಿಯಾಗಿ ನಮೂದು ಮಾಡಲಾಗಿತ್ತು.ಡಮಾರ್ ಎಂದು ಹೇಳಿಕೊಂಡು ಇಂಡೋನೇಷ್ಯಾದಿಂದ ರಾಳ ಮಾದರಿಯ ಅಪರೂಪದ ವಸ್ತುವಿನ ಹೆಸರನ್ನು ನಮೂದಿಸಿ ಆಮದು ಮಾಡಲಾಗುತ್ತಿತ್ತು. ಇದು ಅಪರೂಪದ ವಸ್ತುವಾಗಿದ್ದು ಭಾರತಕ್ಕೆ ನಿಯಮಿತವಾಗಿ ಆಮದು ಮಾಡಿಕೊಳ್ಳುವುದಿಲ್ಲ. ಹೀಗಾಗಿ ಇಂಡೋನೇಷ್ಯಾದಿಂದ ಕಂಟೈನರ್ಗಳಲ್ಲಿ ಮುಂದ್ರಾ ಬಂದರಿಗೆ ಬಂದಿರುವ ವಸ್ತುಗಳಲ್ಲಿ ಅಡಿಕೆ ಇರುವ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 27.81 ಮೆ.ಟನ್ ಅಡಿಕೆ ಪತ್ತೆಯಾಗಿದೆ.
ಅಡಿಕೆ ಆಮದು ಸುಂಕ ಶೇ.110 ಇರುವುದರಿಂದ ವಿದೇಶಿ ಅಡಿಕೆಯನು ಆಮದು ಮಾಡಲು ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಇದುವರೆಗೆ ಡ್ರೈ ಪ್ರುಟ್ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದರೆ ಈಗ ರಾಳದ ಮಾದರಿಯನ್ನು ಉಲ್ಲೇಖಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ, ಅಕ್ರಮ ಆಮದನ್ನು ತಡೆಯುವ ನಿರಂತರ ಪ್ರಯತ್ನಗಳ ಪರಿಣಾಮವಾಗಿ ರೂ.10.38 ಕೋಟಿ ಸುಂಕದ ಮೌಲ್ಯವನ್ನು ಹೊಂದಿರುವ 172.39 ಮೆಟ್ರಿಕ್ ಟನ್ಗಳಷ್ಟು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆ ತಿಳಿಸಿದೆ.
At Mundra Port, Customs Department seized 27.81 metric tonnes of arecanut. The consignment goods were misrepresented, and an investigation is ongoing.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…