Advertisement
MIRROR FOCUS

ಮತ್ತೆ ಮತ್ತೆ ಅಡಿಕೆ ಕಳ್ಳಸಾಗಾಣಿಕೆ…! | ಮುಂದ್ರಾ ಬಂದರಿನಲ್ಲಿ 27.81 ಮೆಟ್ರಿಕ್ ಟನ್ ಅಡಿಕೆ ವಶ |

Share

ಗುಜರಾತ್‌ ನ ಮುಂದ್ರಾ ಬಂದರಿನ ಮೂಲಕ ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಮತ್ತೆ ತಡೆಯಾಗಿದೆ. ಕಸ್ಟಮ್ಸ್‌ ಅಧಿಕಾರಿಗಳು ಸುಮಾರು 1.15 ಕೋಟಿ ರೂಪಾಯಿ ಮೌಲ್ಯದ ಸುಮಾರು 27.81 ಮೆಟ್ರಿಕ್‌ ಟನ್‌ ಅಡಿಕೆಯನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರಾಳದ ಮಾದರಿಯ ವಸ್ತುವನ್ನು ಆಮದು ಎಂದು ನಮೂದಿಸಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗುತ್ತಿತ್ತು.

ಆಮದು ಸರಕನ್ನು ಸುಳ್ಳು ಮಾಹಿತಿಯಾಗಿ ನಮೂದು ಮಾಡಲಾಗಿತ್ತು.ಡಮಾರ್  ಎಂದು ಹೇಳಿಕೊಂಡು  ಇಂಡೋನೇಷ್ಯಾದಿಂದ ರಾಳ ಮಾದರಿಯ ಅಪರೂಪದ ವಸ್ತುವಿನ ಹೆಸರನ್ನು ನಮೂದಿಸಿ ಆಮದು ಮಾಡಲಾಗುತ್ತಿತ್ತು. ಇದು ಅಪರೂಪದ ವಸ್ತುವಾಗಿದ್ದು ಭಾರತಕ್ಕೆ ನಿಯಮಿತವಾಗಿ ಆಮದು ಮಾಡಿಕೊಳ್ಳುವುದಿಲ್ಲ. ಹೀಗಾಗಿ ಇಂಡೋನೇಷ್ಯಾದಿಂದ ಕಂಟೈನರ್‌ಗಳಲ್ಲಿ  ಮುಂದ್ರಾ ಬಂದರಿಗೆ ಬಂದಿರುವ ವಸ್ತುಗಳಲ್ಲಿ ಅಡಿಕೆ ಇರುವ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 27.81 ಮೆ.ಟನ್ ಅಡಿಕೆ ಪತ್ತೆಯಾಗಿದೆ.

ಅಡಿಕೆ ಆಮದು ಸುಂಕ ಶೇ.110 ಇರುವುದರಿಂದ ವಿದೇಶಿ ಅಡಿಕೆಯನು ಆಮದು ಮಾಡಲು ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಇದುವರೆಗೆ ಡ್ರೈ ಪ್ರುಟ್‌ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದರೆ ಈಗ ರಾಳದ ಮಾದರಿಯನ್ನು ಉಲ್ಲೇಖಿಸಲಾಗಿದೆ. ಈ  ಆರ್ಥಿಕ ವರ್ಷದಲ್ಲಿ, ಅಕ್ರಮ ಆಮದನ್ನು ತಡೆಯುವ ನಿರಂತರ ಪ್ರಯತ್ನಗಳ ಪರಿಣಾಮವಾಗಿ ರೂ.10.38 ಕೋಟಿ ಸುಂಕದ ಮೌಲ್ಯವನ್ನು ಹೊಂದಿರುವ 172.39 ಮೆಟ್ರಿಕ್‌ ಟನ್‌ಗಳಷ್ಟು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಇಲಾಖೆ ಪ್ರಕಟಣೆ ತಿಳಿಸಿದೆ.

At Mundra Port, Customs Department seized 27.81 metric tonnes of arecanut. The consignment goods were misrepresented, and an investigation is ongoing.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

12 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

17 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

17 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago