Advertisement
MIRROR FOCUS

ಮತ್ತೆ ಮತ್ತೆ ಅಡಿಕೆ ಕಳ್ಳಸಾಗಾಣಿಕೆ…! | ಮುಂದ್ರಾ ಬಂದರಿನಲ್ಲಿ 27.81 ಮೆಟ್ರಿಕ್ ಟನ್ ಅಡಿಕೆ ವಶ |

Share

ಗುಜರಾತ್‌ ನ ಮುಂದ್ರಾ ಬಂದರಿನ ಮೂಲಕ ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಮತ್ತೆ ತಡೆಯಾಗಿದೆ. ಕಸ್ಟಮ್ಸ್‌ ಅಧಿಕಾರಿಗಳು ಸುಮಾರು 1.15 ಕೋಟಿ ರೂಪಾಯಿ ಮೌಲ್ಯದ ಸುಮಾರು 27.81 ಮೆಟ್ರಿಕ್‌ ಟನ್‌ ಅಡಿಕೆಯನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರಾಳದ ಮಾದರಿಯ ವಸ್ತುವನ್ನು ಆಮದು ಎಂದು ನಮೂದಿಸಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗುತ್ತಿತ್ತು.

ಆಮದು ಸರಕನ್ನು ಸುಳ್ಳು ಮಾಹಿತಿಯಾಗಿ ನಮೂದು ಮಾಡಲಾಗಿತ್ತು.ಡಮಾರ್  ಎಂದು ಹೇಳಿಕೊಂಡು  ಇಂಡೋನೇಷ್ಯಾದಿಂದ ರಾಳ ಮಾದರಿಯ ಅಪರೂಪದ ವಸ್ತುವಿನ ಹೆಸರನ್ನು ನಮೂದಿಸಿ ಆಮದು ಮಾಡಲಾಗುತ್ತಿತ್ತು. ಇದು ಅಪರೂಪದ ವಸ್ತುವಾಗಿದ್ದು ಭಾರತಕ್ಕೆ ನಿಯಮಿತವಾಗಿ ಆಮದು ಮಾಡಿಕೊಳ್ಳುವುದಿಲ್ಲ. ಹೀಗಾಗಿ ಇಂಡೋನೇಷ್ಯಾದಿಂದ ಕಂಟೈನರ್‌ಗಳಲ್ಲಿ  ಮುಂದ್ರಾ ಬಂದರಿಗೆ ಬಂದಿರುವ ವಸ್ತುಗಳಲ್ಲಿ ಅಡಿಕೆ ಇರುವ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 27.81 ಮೆ.ಟನ್ ಅಡಿಕೆ ಪತ್ತೆಯಾಗಿದೆ.

ಅಡಿಕೆ ಆಮದು ಸುಂಕ ಶೇ.110 ಇರುವುದರಿಂದ ವಿದೇಶಿ ಅಡಿಕೆಯನು ಆಮದು ಮಾಡಲು ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಇದುವರೆಗೆ ಡ್ರೈ ಪ್ರುಟ್‌ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದರೆ ಈಗ ರಾಳದ ಮಾದರಿಯನ್ನು ಉಲ್ಲೇಖಿಸಲಾಗಿದೆ. ಈ  ಆರ್ಥಿಕ ವರ್ಷದಲ್ಲಿ, ಅಕ್ರಮ ಆಮದನ್ನು ತಡೆಯುವ ನಿರಂತರ ಪ್ರಯತ್ನಗಳ ಪರಿಣಾಮವಾಗಿ ರೂ.10.38 ಕೋಟಿ ಸುಂಕದ ಮೌಲ್ಯವನ್ನು ಹೊಂದಿರುವ 172.39 ಮೆಟ್ರಿಕ್‌ ಟನ್‌ಗಳಷ್ಟು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಇಲಾಖೆ ಪ್ರಕಟಣೆ ತಿಳಿಸಿದೆ.

At Mundra Port, Customs Department seized 27.81 metric tonnes of arecanut. The consignment goods were misrepresented, and an investigation is ongoing.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

8 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

9 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

11 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

12 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago