Advertisement
ಸುದ್ದಿಗಳು

ಚಳಿಗಾಲದ ಸಮಯದಲ್ಲಿ ಆಹಾರ ಕ್ರಮ ಹೀಗಿರಲಿ

Share

ಚಳಿಗಾಲದಲ್ಲಿ ನಾವು ತುಸು ಹೆಚ್ಚು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಏಕೆಂದರೆ ಈ ವಾತಾವರಣದ ಬದಲಾವಣೆಯಿಂದಲೇ ಆರೋಗ್ಯ ಹೆಚ್ಚು ಕೆಡುವುದು. ಆದುದರಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿದರೆ ಒಳಿತು. ಆಹಾರ ಕ್ರಮದಲ್ಲಿ ಮಾಡುವ ತಪ್ಪುಗಳು ನಮ್ಮ ರೋಗನಿರೋಧಕ ಶಕ್ತಿ ಕುಂದಿಸಿ, ಶೀತ, ಕೆಮ್ಮು ಮತ್ತು ಜೀರ್ಣ ಕ್ರೀಯೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಯಾವರೀತಿ ಆಹಾರ ಕ್ರಮಗಳು ಇರಬೇಕು:

  • ಬಿಸಿಬಿಸಿ ಆಹಾರ ಸೇವನೆ: ತಣ್ಣನೆಯ ಆಹಾರ ಅಥವಾ ಫ್ರೀಡ್ಜ್ ನಿಂದ ನೇರವಾಗಿ ತೆಗೆದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಇದರಿಂದ ಜೀರ್ಣಶಕ್ತಿ ಕುಗ್ಗುತ್ತದೆ, ಹೊಟ್ಟೆ ಉಬ್ಬರ, ಅಜೀರ್ಣ, ಗ್ಯಾಸು ಸಮಸ್ಯೆಗಳು ಹೆಚ್ಚಾಗುತ್ತದೆ, ದೇಹದ ಉಷ್ಣತೆಯ ಸಮತೋಲನ ಹದಗೆಡುತ್ತದೆ. ಆದುದರಿಂದ ಯಾವಾಗಲೂ ಬಿಸಿಬಿಸಿಯಾದ ಮತ್ತು ಅಂದೇ ತಯಾರಿಸಿದ ತಾಜಾ ಆಹಾರ ಸೇವಿಸಿ.
  • ಆರೋಗ್ಯಕರ ಕೊಬ್ಬಿನಂಶ ನಿರ್ಲಕ್ಷ: ದೇಹದ ಗಾತ್ರದಲ್ಲಿ ಬದಲಾವಣೆಯಾಗಬಹುದು ಎಂದು ಅನೇಕರು ತುಪ್ಪ ಅಥವಾ ಕೊಬ್ಬಿನಂಶವಿರುವ ಪದಾರ್ಥಗಳನ್ನು ಸಂಪೂರ್ಣವಾಗಿ ತ್ಯಜಿಸುತ್ತಾರೆ. ಆದರೆ ಚಳಿಗಾಲದಲ್ಲಿ ನೈಸರ್ಗಿಕವಾಗಿ ಒಣ ಋತುವಾಗಿರುವುದರಿಂದ ದೇಹಕ್ಕೆ ಸಾಕಷ್ಟು ಸ್ನಿಗ್ಥತೆ ಅಗತ್ಯ. ಕೊಬ್ಬಿನಂಶ ಬಿಟ್ಟರೆ ಚರ್ಮ ಒಣಗುವುದು, ಕೀಲು ನೋವು ಮತ್ತು ಮಲಬದ್ಧತೆ ಸಮಸ್ಯೆಗಳು ಉಂಟಾಗಬಹುದು.
  • ಪೋಷಣೆ ನೀಡುವ ಆಹಾರ: ಹಸಿ ಸಲಾಡ್ ಗಳಂತಹ ಒಣ ಪದಾರ್ಥಗಳನ್ನು ಚಳಿಗಾಲದಲ್ಲಿ ಅತಿಯಾಗಿ ಸೇವಿಸುವುದು ತಪ್ಪು. ಇದರಿಂದ ವಾತ ದೋಷ ಹೆಚ್ಚಿಸುತ್ತದೆ. ಒಣ ಆಹಾರ ವಾತ ಹೆಚ್ಚಿಸಿ ದೇಹದಲ್ಲಿ ಬಿಗಿತ, ನೋವು ಹಾಗೂ ಜೀರ್ಣ ಸಮಸ್ಯೆ ತಂದೊಡ್ಡುತ್ತವೆ. ಆದುದರಿಂದ ಒಣ ಆಹಾರದ ಜೊತೆಗೆ ತುಪ್ಪ, ಮೊಸರು ಅಥವಾ ರಸಂನಂತಹ ದ್ರವ ಪದಾರ್ಥ ಬಳಸಿ.
  • ಚಳಿಗಾಲದಲ್ಲಿ ಸರಿಯಾದ ಆಹಾರದಿಂದ ಈ ಋತುವಿನಲ್ಲಿ ಸಿಗುವ ಶಕ್ತಿ, ಪೋಷಣ್ ಮತ್ತು ಸ್ಥಿರತೆಯನ್ನು ಪಡೆಯಲು ಸಾಧ್ಯ. ವಾತಾವರಣಕ್ಕೆ ತಕ್ಕಂತೆ ಆಹಾರ ಬದಲಾವಣೆ ಉತ್ತಮ. ಹೀಗಿದ್ದ ಪಕ್ಷದಲ್ಲಿ ಸರಿಯಾದ ರೋಗ ನೀರೋಧಕ ಶಕ್ತಿಯನ್ನು ಹೆಚ್ಚಿಸಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…

8 hours ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…

9 hours ago

2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ

2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…

9 hours ago

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…

9 hours ago

ಕೃಷಿ ಭೂಮಿಯಲ್ಲಿರುವ ವಿದ್ಯುತ್ ಕಂಬಕ್ಕೆ ಹೊಸ ನಿಯಮ

ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…

9 hours ago

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…

10 hours ago