Advertisement
ಸುದ್ದಿಗಳು

ಚಳಿಗಾಲದ ಸಮಯದಲ್ಲಿ ಆಹಾರ ಕ್ರಮ ಹೀಗಿರಲಿ

Share

ಚಳಿಗಾಲದಲ್ಲಿ ನಾವು ತುಸು ಹೆಚ್ಚು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಏಕೆಂದರೆ ಈ ವಾತಾವರಣದ ಬದಲಾವಣೆಯಿಂದಲೇ ಆರೋಗ್ಯ ಹೆಚ್ಚು ಕೆಡುವುದು. ಆದುದರಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿದರೆ ಒಳಿತು. ಆಹಾರ ಕ್ರಮದಲ್ಲಿ ಮಾಡುವ ತಪ್ಪುಗಳು ನಮ್ಮ ರೋಗನಿರೋಧಕ ಶಕ್ತಿ ಕುಂದಿಸಿ, ಶೀತ, ಕೆಮ್ಮು ಮತ್ತು ಜೀರ್ಣ ಕ್ರೀಯೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಯಾವರೀತಿ ಆಹಾರ ಕ್ರಮಗಳು ಇರಬೇಕು:

  • ಬಿಸಿಬಿಸಿ ಆಹಾರ ಸೇವನೆ: ತಣ್ಣನೆಯ ಆಹಾರ ಅಥವಾ ಫ್ರೀಡ್ಜ್ ನಿಂದ ನೇರವಾಗಿ ತೆಗೆದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಇದರಿಂದ ಜೀರ್ಣಶಕ್ತಿ ಕುಗ್ಗುತ್ತದೆ, ಹೊಟ್ಟೆ ಉಬ್ಬರ, ಅಜೀರ್ಣ, ಗ್ಯಾಸು ಸಮಸ್ಯೆಗಳು ಹೆಚ್ಚಾಗುತ್ತದೆ, ದೇಹದ ಉಷ್ಣತೆಯ ಸಮತೋಲನ ಹದಗೆಡುತ್ತದೆ. ಆದುದರಿಂದ ಯಾವಾಗಲೂ ಬಿಸಿಬಿಸಿಯಾದ ಮತ್ತು ಅಂದೇ ತಯಾರಿಸಿದ ತಾಜಾ ಆಹಾರ ಸೇವಿಸಿ.
  • ಆರೋಗ್ಯಕರ ಕೊಬ್ಬಿನಂಶ ನಿರ್ಲಕ್ಷ: ದೇಹದ ಗಾತ್ರದಲ್ಲಿ ಬದಲಾವಣೆಯಾಗಬಹುದು ಎಂದು ಅನೇಕರು ತುಪ್ಪ ಅಥವಾ ಕೊಬ್ಬಿನಂಶವಿರುವ ಪದಾರ್ಥಗಳನ್ನು ಸಂಪೂರ್ಣವಾಗಿ ತ್ಯಜಿಸುತ್ತಾರೆ. ಆದರೆ ಚಳಿಗಾಲದಲ್ಲಿ ನೈಸರ್ಗಿಕವಾಗಿ ಒಣ ಋತುವಾಗಿರುವುದರಿಂದ ದೇಹಕ್ಕೆ ಸಾಕಷ್ಟು ಸ್ನಿಗ್ಥತೆ ಅಗತ್ಯ. ಕೊಬ್ಬಿನಂಶ ಬಿಟ್ಟರೆ ಚರ್ಮ ಒಣಗುವುದು, ಕೀಲು ನೋವು ಮತ್ತು ಮಲಬದ್ಧತೆ ಸಮಸ್ಯೆಗಳು ಉಂಟಾಗಬಹುದು.
  • ಪೋಷಣೆ ನೀಡುವ ಆಹಾರ: ಹಸಿ ಸಲಾಡ್ ಗಳಂತಹ ಒಣ ಪದಾರ್ಥಗಳನ್ನು ಚಳಿಗಾಲದಲ್ಲಿ ಅತಿಯಾಗಿ ಸೇವಿಸುವುದು ತಪ್ಪು. ಇದರಿಂದ ವಾತ ದೋಷ ಹೆಚ್ಚಿಸುತ್ತದೆ. ಒಣ ಆಹಾರ ವಾತ ಹೆಚ್ಚಿಸಿ ದೇಹದಲ್ಲಿ ಬಿಗಿತ, ನೋವು ಹಾಗೂ ಜೀರ್ಣ ಸಮಸ್ಯೆ ತಂದೊಡ್ಡುತ್ತವೆ. ಆದುದರಿಂದ ಒಣ ಆಹಾರದ ಜೊತೆಗೆ ತುಪ್ಪ, ಮೊಸರು ಅಥವಾ ರಸಂನಂತಹ ದ್ರವ ಪದಾರ್ಥ ಬಳಸಿ.
  • ಚಳಿಗಾಲದಲ್ಲಿ ಸರಿಯಾದ ಆಹಾರದಿಂದ ಈ ಋತುವಿನಲ್ಲಿ ಸಿಗುವ ಶಕ್ತಿ, ಪೋಷಣ್ ಮತ್ತು ಸ್ಥಿರತೆಯನ್ನು ಪಡೆಯಲು ಸಾಧ್ಯ. ವಾತಾವರಣಕ್ಕೆ ತಕ್ಕಂತೆ ಆಹಾರ ಬದಲಾವಣೆ ಉತ್ತಮ. ಹೀಗಿದ್ದ ಪಕ್ಷದಲ್ಲಿ ಸರಿಯಾದ ರೋಗ ನೀರೋಧಕ ಶಕ್ತಿಯನ್ನು ಹೆಚ್ಚಿಸಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

20 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago