Advertisement
ಸುದ್ದಿಗಳು

ಚಳಿಗಾಲದ ಸಮಯದಲ್ಲಿ ಆಹಾರ ಕ್ರಮ ಹೀಗಿರಲಿ

Share

ಚಳಿಗಾಲದಲ್ಲಿ ನಾವು ತುಸು ಹೆಚ್ಚು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಏಕೆಂದರೆ ಈ ವಾತಾವರಣದ ಬದಲಾವಣೆಯಿಂದಲೇ ಆರೋಗ್ಯ ಹೆಚ್ಚು ಕೆಡುವುದು. ಆದುದರಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿದರೆ ಒಳಿತು. ಆಹಾರ ಕ್ರಮದಲ್ಲಿ ಮಾಡುವ ತಪ್ಪುಗಳು ನಮ್ಮ ರೋಗನಿರೋಧಕ ಶಕ್ತಿ ಕುಂದಿಸಿ, ಶೀತ, ಕೆಮ್ಮು ಮತ್ತು ಜೀರ್ಣ ಕ್ರೀಯೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಯಾವರೀತಿ ಆಹಾರ ಕ್ರಮಗಳು ಇರಬೇಕು:

  • ಬಿಸಿಬಿಸಿ ಆಹಾರ ಸೇವನೆ: ತಣ್ಣನೆಯ ಆಹಾರ ಅಥವಾ ಫ್ರೀಡ್ಜ್ ನಿಂದ ನೇರವಾಗಿ ತೆಗೆದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಇದರಿಂದ ಜೀರ್ಣಶಕ್ತಿ ಕುಗ್ಗುತ್ತದೆ, ಹೊಟ್ಟೆ ಉಬ್ಬರ, ಅಜೀರ್ಣ, ಗ್ಯಾಸು ಸಮಸ್ಯೆಗಳು ಹೆಚ್ಚಾಗುತ್ತದೆ, ದೇಹದ ಉಷ್ಣತೆಯ ಸಮತೋಲನ ಹದಗೆಡುತ್ತದೆ. ಆದುದರಿಂದ ಯಾವಾಗಲೂ ಬಿಸಿಬಿಸಿಯಾದ ಮತ್ತು ಅಂದೇ ತಯಾರಿಸಿದ ತಾಜಾ ಆಹಾರ ಸೇವಿಸಿ.
  • ಆರೋಗ್ಯಕರ ಕೊಬ್ಬಿನಂಶ ನಿರ್ಲಕ್ಷ: ದೇಹದ ಗಾತ್ರದಲ್ಲಿ ಬದಲಾವಣೆಯಾಗಬಹುದು ಎಂದು ಅನೇಕರು ತುಪ್ಪ ಅಥವಾ ಕೊಬ್ಬಿನಂಶವಿರುವ ಪದಾರ್ಥಗಳನ್ನು ಸಂಪೂರ್ಣವಾಗಿ ತ್ಯಜಿಸುತ್ತಾರೆ. ಆದರೆ ಚಳಿಗಾಲದಲ್ಲಿ ನೈಸರ್ಗಿಕವಾಗಿ ಒಣ ಋತುವಾಗಿರುವುದರಿಂದ ದೇಹಕ್ಕೆ ಸಾಕಷ್ಟು ಸ್ನಿಗ್ಥತೆ ಅಗತ್ಯ. ಕೊಬ್ಬಿನಂಶ ಬಿಟ್ಟರೆ ಚರ್ಮ ಒಣಗುವುದು, ಕೀಲು ನೋವು ಮತ್ತು ಮಲಬದ್ಧತೆ ಸಮಸ್ಯೆಗಳು ಉಂಟಾಗಬಹುದು.
  • ಪೋಷಣೆ ನೀಡುವ ಆಹಾರ: ಹಸಿ ಸಲಾಡ್ ಗಳಂತಹ ಒಣ ಪದಾರ್ಥಗಳನ್ನು ಚಳಿಗಾಲದಲ್ಲಿ ಅತಿಯಾಗಿ ಸೇವಿಸುವುದು ತಪ್ಪು. ಇದರಿಂದ ವಾತ ದೋಷ ಹೆಚ್ಚಿಸುತ್ತದೆ. ಒಣ ಆಹಾರ ವಾತ ಹೆಚ್ಚಿಸಿ ದೇಹದಲ್ಲಿ ಬಿಗಿತ, ನೋವು ಹಾಗೂ ಜೀರ್ಣ ಸಮಸ್ಯೆ ತಂದೊಡ್ಡುತ್ತವೆ. ಆದುದರಿಂದ ಒಣ ಆಹಾರದ ಜೊತೆಗೆ ತುಪ್ಪ, ಮೊಸರು ಅಥವಾ ರಸಂನಂತಹ ದ್ರವ ಪದಾರ್ಥ ಬಳಸಿ.
  • ಚಳಿಗಾಲದಲ್ಲಿ ಸರಿಯಾದ ಆಹಾರದಿಂದ ಈ ಋತುವಿನಲ್ಲಿ ಸಿಗುವ ಶಕ್ತಿ, ಪೋಷಣ್ ಮತ್ತು ಸ್ಥಿರತೆಯನ್ನು ಪಡೆಯಲು ಸಾಧ್ಯ. ವಾತಾವರಣಕ್ಕೆ ತಕ್ಕಂತೆ ಆಹಾರ ಬದಲಾವಣೆ ಉತ್ತಮ. ಹೀಗಿದ್ದ ಪಕ್ಷದಲ್ಲಿ ಸರಿಯಾದ ರೋಗ ನೀರೋಧಕ ಶಕ್ತಿಯನ್ನು ಹೆಚ್ಚಿಸಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

1 hour ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

1 hour ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

11 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago