Advertisement
ಸುದ್ದಿಗಳು

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ

Share

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದ ಅವರು ಪ್ರಾಣಿ ಸಂಪತ್ತನ್ನು ನಾಶ ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದು ಹೇಳಿದ್ದಾರೆ. ಆನೆ ಮತ್ತು ಹುಲಿ ಸಂಪತ್ತಿನಲ್ಲಿ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು ಎಂದು ತಿಳಿಸಿದ್ದಾರೆ. ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಅಭಿಪ್ರಾಯಪಟ್ಟಿದ್ದಾರೆ. ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಅರಣ್ಯ ರಾಯಭಾರಿ ಅನಿಲ್ ಕುಂಬ್ಳೆ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago