Advertisement
MIRROR FOCUS

ಇಡೀ ವಿಶ್ವದ ಕಣ್ಣು ಇಂಡೋ-ಆಸೀಸ್‌ ರೋಚಕ ಫೈನಲ್‌ ಮೇಲೆ | ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಆಗಮಿಸಲಿದ್ದಾರಾ..? | ಫೈನಲ್‌ ಪಂದ್ಯ ವಿಶೇಷತೆ ಏನು ಗೊತ್ತಾ..?

Share

ಇಡೀ ಭಾರತ ಮಾತ್ರವಲ್ಲ, ಇಡೀ ವಿಶ್ವದ ಕಣ್ಣು ಅದಿತ್ಯವಾರ ನವೆಂಬರ್ 19ರಂದು ಅಹ್ಮದಾಬಾದ್(Ahmedabad) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿರುವ ಐಸಿಸಿ ವಿಶ್ವಕಪ್ 2023ರ(World Cup -2023) ಫೈನಲ್ ಪಂದ್ಯದ(Final match) ಮೇಲಿದೆ. ಪಂದ್ಯ ವೀಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಜರಾಗುವ ನಿರೀಕ್ಷೆಯಿದೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
Advertisement

ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್‌ ಗವಾಸ್ಕರ್‌ ಸರಣಿಯ 4ನೇ ಟೆಸ್ಟ್‌ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಅಂದು ವಿಶ್ವಕಪ್‌ಗೆ (ICC World Cup) ಮತ್ತಷ್ಟು ರಂಗು ತರಲು ಹಲವು ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.

Advertisement

ಏನೇನು ವಿಶೇಷ..? : ನವೆಂಬರ್‌ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್‌ ಫೈನಲ್‌ (World Cup Final) ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್‌ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್‌ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್‌ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

– ಅಂತರ್ಜಾಲ ಮಾಹಿತಿ

Advertisement

Not only India, the eyes of the whole world are on the final match of the ICC World Cup 2023 (World Cup-2023) to be held at the Narendra Modi Stadium in Ahmedabad on Sunday, November 19. Prime Minister Narendra Modi is expected to attend the match. Sources said that the Prime Minister will attend the ICC World Cup 2023 final match as the guest of honour.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

3 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

5 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago