ಮುಂದಿನ ಜನವರಿಯೊಳಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ | ಈ ಬಾಂಬ್ ಸಿಡಿಸಿದವರು ಯಾರು..?

September 17, 2023
4:29 PM
ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ರಾಜ್ಯದಲ್ಲಿ ಈ ಬಾರಿ ಬಹುಮತದ ಕಾಂಗ್ರೆಸ್‌ ಸರ್ಕಾರ ಬಂದಿದ್ರೂ, ಆಗಾಗ ಸರ್ಕಾರ ಬೀಳುತ್ತೆ, ಮತ್ತೆ ಕಿಚಿಡಿ ಸರ್ಕಾರ ಬರುತ್ತೆ ಅನ್ನೋ ಮಾತು ಕೇಳಿ ಬರುತ್ತಲೇ ಇದೆ. ಈ ಬಾರಿ ಬಿಜೆಪಿಯ ನಾಯಕರೊಬ್ಬರು ದೊಡ್ಡ ಬಾಂಬ್ ಸಿಡಿಸಿದ್ದಾರೆ. ಮುಂಬರುವ ಜನವರಿ ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್, ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

Advertisement

ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ ಎಂದು  ನುಡಿದ ಯತ್ನಾಳ್, ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು? ಎಂದು ಪ್ರಶ್ನಿಸಿದರು.

ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಹಿರಿಯರು, ಅವರಿಗೆ ನೋವಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ಜನವರಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗೋದು ಖಚಿತ ಎಂದ ಯತ್ನಾಳ್, ಇಷ್ಟೆಲ್ಲ ಗೊತ್ತಿದ್ದು ಅವರು ಆಪರೇಶನ್ ಹಸ್ತ ಮಾಡುತ್ತಿದ್ದಾರೆ. ನಮ್ಮ ಸಂಪರ್ಕದಲ್ಲಿಯೂ 45 ಜನ ಶಾಸಕರಿದ್ದಾರೆ ಎಂದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror