Advertisement
MIRROR FOCUS

ಮುಂದಿನ ಜನವರಿಯೊಳಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ | ಈ ಬಾಂಬ್ ಸಿಡಿಸಿದವರು ಯಾರು..?

Share

ರಾಜ್ಯದಲ್ಲಿ ಈ ಬಾರಿ ಬಹುಮತದ ಕಾಂಗ್ರೆಸ್‌ ಸರ್ಕಾರ ಬಂದಿದ್ರೂ, ಆಗಾಗ ಸರ್ಕಾರ ಬೀಳುತ್ತೆ, ಮತ್ತೆ ಕಿಚಿಡಿ ಸರ್ಕಾರ ಬರುತ್ತೆ ಅನ್ನೋ ಮಾತು ಕೇಳಿ ಬರುತ್ತಲೇ ಇದೆ. ಈ ಬಾರಿ ಬಿಜೆಪಿಯ ನಾಯಕರೊಬ್ಬರು ದೊಡ್ಡ ಬಾಂಬ್ ಸಿಡಿಸಿದ್ದಾರೆ. ಮುಂಬರುವ ಜನವರಿ ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್, ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ ಎಂದು  ನುಡಿದ ಯತ್ನಾಳ್, ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು? ಎಂದು ಪ್ರಶ್ನಿಸಿದರು.

ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಹಿರಿಯರು, ಅವರಿಗೆ ನೋವಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ಜನವರಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗೋದು ಖಚಿತ ಎಂದ ಯತ್ನಾಳ್, ಇಷ್ಟೆಲ್ಲ ಗೊತ್ತಿದ್ದು ಅವರು ಆಪರೇಶನ್ ಹಸ್ತ ಮಾಡುತ್ತಿದ್ದಾರೆ. ನಮ್ಮ ಸಂಪರ್ಕದಲ್ಲಿಯೂ 45 ಜನ ಶಾಸಕರಿದ್ದಾರೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

16 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago