Advertisement
MIRROR FOCUS

ಮುಂದಿನ ಜನವರಿಯೊಳಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ | ಈ ಬಾಂಬ್ ಸಿಡಿಸಿದವರು ಯಾರು..?

Share

ರಾಜ್ಯದಲ್ಲಿ ಈ ಬಾರಿ ಬಹುಮತದ ಕಾಂಗ್ರೆಸ್‌ ಸರ್ಕಾರ ಬಂದಿದ್ರೂ, ಆಗಾಗ ಸರ್ಕಾರ ಬೀಳುತ್ತೆ, ಮತ್ತೆ ಕಿಚಿಡಿ ಸರ್ಕಾರ ಬರುತ್ತೆ ಅನ್ನೋ ಮಾತು ಕೇಳಿ ಬರುತ್ತಲೇ ಇದೆ. ಈ ಬಾರಿ ಬಿಜೆಪಿಯ ನಾಯಕರೊಬ್ಬರು ದೊಡ್ಡ ಬಾಂಬ್ ಸಿಡಿಸಿದ್ದಾರೆ. ಮುಂಬರುವ ಜನವರಿ ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್, ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ ಎಂದು  ನುಡಿದ ಯತ್ನಾಳ್, ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು? ಎಂದು ಪ್ರಶ್ನಿಸಿದರು.

ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಹಿರಿಯರು, ಅವರಿಗೆ ನೋವಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ಜನವರಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗೋದು ಖಚಿತ ಎಂದ ಯತ್ನಾಳ್, ಇಷ್ಟೆಲ್ಲ ಗೊತ್ತಿದ್ದು ಅವರು ಆಪರೇಶನ್ ಹಸ್ತ ಮಾಡುತ್ತಿದ್ದಾರೆ. ನಮ್ಮ ಸಂಪರ್ಕದಲ್ಲಿಯೂ 45 ಜನ ಶಾಸಕರಿದ್ದಾರೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

9 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

9 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 days ago