ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು ರೈತರಿಗೆ ಉಪಯುಕ್ತವಾಗುವ ಹಾಗೂ ರೈತರನ್ನು ರಕ್ಷಣೆ ಮಾಡುವ ಬಜೆಟ್ ಮಂಡನೆಯಾಗಬೇಕೆಂದು ರೈತ ಮುಖಂಡ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಮಾತನಾಡಿದ ಅವರು, ಈ ಬಾರಿಯ ಕೇಂದ್ರ ಬಜೆಟ್ ಬಗ್ಗೆ ಕಾತುರದಿಂದ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಹಾಗೂ ಕೃಷಿಯಿಂದ ರೈತರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ರೈತರಿಗೆ ಉಪಯುಕ್ತವಾಗುವ ಹಾಗೂ ರೈತರ ರಕ್ಷಣೆ ಮಾಡುವ ಬಜೆಟ್ ನಿರೀಕ್ಷೆಯ್ಲಲಿದ್ದೇವೆ ಎಂದು ತಿಳಿಸಿದ್ದಾರೆ. ಬಹಳ ಮುಖ್ಯವಾಗಿ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಆಗಬೇಕು. ರೈತರ ಎಲ್ಲಾ ಬೆಳೆಗಳ ಮೇಲೆ ಹಾಕಿರುವ ಜಿಎಸ್ ಟಿ ಕರ ವನ್ನು ರದ್ದು ಮಾಡಬೇಕು. ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…