Advertisement
The Rural Mirror ಫಾಲೋಅಪ್

#Chandrayaan3| ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆ | ಚಂದ್ರಯಾನ-3 ಸೆರೆಹಿಡಿದ ಚಂದ್ರನ ಮೊದಲ ಚಿತ್ರ ಬಿಡುಗಡೆ |

Share

ಭಾರತದ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ವಿಜ್ಞಾನಿಗಳ ಆಕಾಂಕ್ಷೆಯಂತೆ ತನ್ನ ಗುರಿಯನ್ನು ತಲುಪುತ್ತಿದೆ. ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 #Chandrayaan-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

 

ಮೂನ್ ಮಿಷನ್  ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್#ISTRAC ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಶನಿವಾರ ಹೇಳಿತ್ತು.

ಮುಂದಿನ ಕಾರ್ಯಾಚರಣೆ ಹೇಗೆ ನಡೆಯಲಿದೆ? :  ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ. ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.

Source : Twitter 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

12 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

16 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

20 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

20 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago