Advertisement
The Rural Mirror ಫಾಲೋಅಪ್

#Chandrayaan3| ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆ | ಚಂದ್ರಯಾನ-3 ಸೆರೆಹಿಡಿದ ಚಂದ್ರನ ಮೊದಲ ಚಿತ್ರ ಬಿಡುಗಡೆ |

Share

ಭಾರತದ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ವಿಜ್ಞಾನಿಗಳ ಆಕಾಂಕ್ಷೆಯಂತೆ ತನ್ನ ಗುರಿಯನ್ನು ತಲುಪುತ್ತಿದೆ. ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 #Chandrayaan-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

 

ಮೂನ್ ಮಿಷನ್  ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್#ISTRAC ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಶನಿವಾರ ಹೇಳಿತ್ತು.

ಮುಂದಿನ ಕಾರ್ಯಾಚರಣೆ ಹೇಗೆ ನಡೆಯಲಿದೆ? :  ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ. ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.

Source : Twitter 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

4 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

22 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago