ಭಾರತದ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ವಿಜ್ಞಾನಿಗಳ ಆಕಾಂಕ್ಷೆಯಂತೆ ತನ್ನ ಗುರಿಯನ್ನು ತಲುಪುತ್ತಿದೆ. ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 #Chandrayaan-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಮೂನ್ ಮಿಷನ್ ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್#ISTRAC ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಶನಿವಾರ ಹೇಳಿತ್ತು.
ಮುಂದಿನ ಕಾರ್ಯಾಚರಣೆ ಹೇಗೆ ನಡೆಯಲಿದೆ? : ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ. ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.
Source : Twitter
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…