ಇಂದಿನಿಂದ ವಿಧಾನಸಭೆ ಬಜೆಟ್ ಅಧಿವೇಶನ #BudgetSession ಆರಂಭಗೊಳ್ಳಲಿದೆ. ಹಣಕಾಸು ಸಚಿವರೂ ಆದ ಸಿಎಂ ಸಿದ್ದರಾಮಯ್ಯ #Siddaramaiah ಹೊಸ ಸರ್ಕಾರದ ಮೊದಲ ಪರಿಪೂರ್ಣ ಬಜೆಟ್ ಮಂಡಿಸಲಿದ್ದಾರೆ. ವಿಪಕ್ಷಗಳೂ ಸರ್ಕಾರವನ್ನು ಕಟ್ಟಿಹಾಕಲು ಅಸ್ತ್ರ ತಯಾರು ಮಾಡಿಕೊಂಡಿವೆ. ಹೊಸ ಸರ್ಕಾರದ ಮೊದಲ ಸಂಪೂರ್ಣ ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಬರೀ ಅಧಿವೇಶನ ಅಲ್ಲ, ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಹೊಸ ಸರ್ಕಾರದ ಮೊದಲ ಪರಿಪೂರ್ಣ ಬಜೆಟ್ ಮಂಡಿಸಲಿದ್ದಾರೆ.
16ನೇ ವಿಧಾನಸಭೆಯ ಮೊದಲ ಅಧಿವೇಶನ ಮಧ್ಯಾಹ್ನ 12 ಗಂಟೆಗೆ ಶುರುವಾಗಲಿದೆ. ಮೊಟ್ಟ ಮೊದಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಭಾಷಣ ಮಾಡುತ್ತಾರೆ. ಆಮೇಲೆ ನೂತನ ಶಾಸಕರಿಗೆ ಅಭಿನಂದನೆ, ಅಗಲಿದ ಗಣ್ಯರಿಗೆ ಸಂತಾಪ ಸೂಚನೆ. ಆಮೇಲೆ ಸಣ್ಣಪುಟ್ಟ ಚರ್ಚೆ ಮುಗಿಸಿ ಕಲಾಪ ಅಂತ್ಯವಾಗಲಿದೆ.
ಇಂದಿನಿಂದ ಜುಲೈ 14ರವರೆಗೆ ಕಲಾಪ ನಡೆಯಲಿದ್ದು, 2 ದಿನ ರಜೆ, 8 ದಿನ ಅಧಿವೇಶನ ನಡೆಯಲಿದೆ. ಸಿದ್ದರಾಮಯ್ಯ ಸರ್ಕಾರವನ್ನ ಕಟ್ಟಿಹಾಕುವ ಗಂಡುಗಲಿ ಯಾರು ಎಂದು ಇನ್ನೂ ನಿರ್ಧಾರ ಆಗಿಲ್ಲ. ಸರ್ಕಾರವನ್ನ ಕಟ್ಟಿ ಹಾಕಲು ಜೆಡಿಎಸ್, ಬಿಜೆಪಿ ಕೂಡ ಸರ್ವಸನ್ನದ್ಧವಾಗುತ್ತಿದೆ. ಜೆಡಿಎಸ್ ಅಂತೂ ಒಂದು ಹೆಜ್ಜೆ ಮುಂದಿಟ್ಟಿದ್ದು ಬೆಂಗಳೂರಿನ ಜೆ.ಪಿ ಭವನದಲ್ಲಿ ಶಾಸಕರ ಜೊತೆ ಸಭೆಯನ್ನೂ ನಡೆಸಿದ್ದಾರೆ.
ಇತ್ತ, ಸಿದ್ದರಾಮಯ್ಯ ಜುಲೈ 7ಕ್ಕೆ ಅಂದರೆ ಶುಕ್ರವಾರ ಬಜೆಟ್ ಮಂಡಿಸುತ್ತಾರೆ. ಆದರೆ ಬಜೆಟ್ ಲೆಕ್ಕಾಚಾರ ಅಷ್ಟು ಸುಲಭವಲ್ಲ. ಏಕೆಂದರೆ ಸಿದ್ದು ಸರ್ಕಾರಕ್ಕೆ ಸವಾಲುಗಳು ಸಾಕಷ್ಟಿವೆ. 16ನೇ ವಿಧಾನಸಭೆ ಅಧಿವೇಶನದಲ್ಲಿ ಸಿದ್ದರಾಮಯ್ಯ ಮಂಡಿಸ್ತಿರುವ 14ನೇ ಬಜೆಟ್ ಇದಾಗಿದ್ದು, ಮೊದಲು ಕೊಟ್ಟಿರುವ ಐದು ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರ್ಬೇಕಾದ ಅನಿವಾರ್ಯತೆ ಇದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…