Advertisement
ಸುದ್ದಿಗಳು

#Karnataka | ನೂತನ ಸರ್ಕಾರದ ಮೊದಲ ಪೂರ್ಣ ಅಧಿವೇಶನ ಆರಂಭ | ಗ್ಯಾರಂಟಿಗಳ ವಿರುದ್ಧ ತೊಡೆ ತಟ್ಟಲಿರುವ ವಿರೋಧ ಪಕ್ಷಗಳು

Share

ಇಂದಿನಿಂದ ವಿಧಾನಸಭೆ ಬಜೆಟ್​ ಅಧಿವೇಶನ #BudgetSession ಆರಂಭಗೊಳ್ಳಲಿದೆ. ಹಣಕಾಸು ಸಚಿವರೂ ಆದ ಸಿಎಂ ಸಿದ್ದರಾಮಯ್ಯ #Siddaramaiah ಹೊಸ ಸರ್ಕಾರದ ಮೊದಲ ಪರಿಪೂರ್ಣ ಬಜೆಟ್ ಮಂಡಿಸಲಿದ್ದಾರೆ. ವಿಪಕ್ಷಗಳೂ ಸರ್ಕಾರವನ್ನು ಕಟ್ಟಿಹಾಕಲು ಅಸ್ತ್ರ ತಯಾರು ಮಾಡಿಕೊಂಡಿವೆ. ಹೊಸ ಸರ್ಕಾರದ ಮೊದಲ ಸಂಪೂರ್ಣ ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಬರೀ ಅಧಿವೇಶನ ಅಲ್ಲ, ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಹೊಸ ಸರ್ಕಾರದ ಮೊದಲ ಪರಿಪೂರ್ಣ ಬಜೆಟ್ ಮಂಡಿಸಲಿದ್ದಾರೆ.

16ನೇ ವಿಧಾನಸಭೆಯ ಮೊದಲ ಅಧಿವೇಶನ ಮಧ್ಯಾಹ್ನ 12 ಗಂಟೆಗೆ ಶುರುವಾಗಲಿದೆ. ಮೊಟ್ಟ ಮೊದಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ತಾವರ್​ಚಂದ್​ ಗೆಹ್ಲೋಟ್​​ ಭಾಷಣ ಮಾಡುತ್ತಾರೆ. ಆಮೇಲೆ ನೂತನ ಶಾಸಕರಿಗೆ ಅಭಿನಂದನೆ, ಅಗಲಿದ ಗಣ್ಯರಿಗೆ ಸಂತಾಪ ಸೂಚನೆ. ಆಮೇಲೆ ಸಣ್ಣಪುಟ್ಟ ಚರ್ಚೆ ಮುಗಿಸಿ ಕಲಾಪ ಅಂತ್ಯವಾಗಲಿದೆ.

ಇಂದಿನಿಂದ ಜುಲೈ 14ರವರೆಗೆ ಕಲಾಪ ನಡೆಯಲಿದ್ದು, 2 ದಿನ ರಜೆ, 8 ದಿನ ಅಧಿವೇಶನ ನಡೆಯಲಿದೆ. ಸಿದ್ದರಾಮಯ್ಯ ಸರ್ಕಾರವನ್ನ ಕಟ್ಟಿಹಾಕುವ ಗಂಡುಗಲಿ ಯಾರು ಎಂದು ಇನ್ನೂ ನಿರ್ಧಾರ ಆಗಿಲ್ಲ. ಸರ್ಕಾರವನ್ನ ಕಟ್ಟಿ ಹಾಕಲು ಜೆಡಿಎಸ್​, ಬಿಜೆಪಿ ಕೂಡ ಸರ್ವಸನ್ನದ್ಧವಾಗುತ್ತಿದೆ. ಜೆಡಿಎಸ್​​ ಅಂತೂ ಒಂದು ಹೆಜ್ಜೆ ಮುಂದಿಟ್ಟಿದ್ದು ಬೆಂಗಳೂರಿನ ಜೆ.ಪಿ ಭವನದಲ್ಲಿ ಶಾಸಕರ ಜೊತೆ ಸಭೆಯನ್ನೂ ನಡೆಸಿದ್ದಾರೆ.

ಇತ್ತ, ಸಿದ್ದರಾಮಯ್ಯ ಜುಲೈ 7ಕ್ಕೆ ಅಂದರೆ ಶುಕ್ರವಾರ ಬಜೆಟ್​ ಮಂಡಿಸುತ್ತಾರೆ. ಆದರೆ ಬಜೆಟ್​​ ಲೆಕ್ಕಾಚಾರ ಅಷ್ಟು ಸುಲಭವಲ್ಲ. ಏಕೆಂದರೆ ಸಿದ್ದು ಸರ್ಕಾರಕ್ಕೆ ಸವಾಲುಗಳು ಸಾಕಷ್ಟಿವೆ. 16ನೇ ವಿಧಾನಸಭೆ ಅಧಿವೇಶನದಲ್ಲಿ ಸಿದ್ದರಾಮಯ್ಯ ಮಂಡಿಸ್ತಿರುವ 14ನೇ ಬಜೆಟ್ ಇದಾಗಿದ್ದು, ಮೊದಲು ಕೊಟ್ಟಿರುವ ಐದು ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರ್ಬೇಕಾದ ಅನಿವಾರ್ಯತೆ ಇದೆ.

ಪ್ರಣಾಳಿಕೆಯಲ್ಲಿ ಕೊಟ್ಟಿರುವ ನೂರಾರು ಘೋಷಣೆಗಳನ್ನೂ ಈಡೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದರ ಜೊತೆಗೆ ರಾಜ್ಯದಲ್ಲಿ ಮಳೆ ಕೊರತೆಯಿಂದ ಬಿತ್ತನೆ ಇಲ್ಲದೇ ರೈತರು ಕಂಗಾಲಾಗಿದ್ದರೆ, ಬರದ ಭಯ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಒಟ್ಟಾರೆ ರೈತರ ಕಷ್ಟಕ್ಕೆ ಸ್ಪಂಧಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರ ನಡುವೆ ಬೆಲೆ ಏರಿಸಿದರೆ ಉದ್ಯಮಿಗಳು, ಜನ ತಿರುಗಿಬೀಳುವ ಭಯ ಹಾಗಾಗಿ ಸರಿದೂಗಿಸಬೇಕಾದ ಜವಾಬ್ದಾರಿ ಸಿಎಂ ಅವರ ಹೆಗಲ ಮೇಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

40 minutes ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 hour ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

10 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

13 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

20 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago