ಇಂದಿನಿಂದ ವಿಧಾನಸಭೆ ಬಜೆಟ್ ಅಧಿವೇಶನ #BudgetSession ಆರಂಭಗೊಳ್ಳಲಿದೆ. ಹಣಕಾಸು ಸಚಿವರೂ ಆದ ಸಿಎಂ ಸಿದ್ದರಾಮಯ್ಯ #Siddaramaiah ಹೊಸ ಸರ್ಕಾರದ ಮೊದಲ ಪರಿಪೂರ್ಣ ಬಜೆಟ್ ಮಂಡಿಸಲಿದ್ದಾರೆ. ವಿಪಕ್ಷಗಳೂ ಸರ್ಕಾರವನ್ನು ಕಟ್ಟಿಹಾಕಲು ಅಸ್ತ್ರ ತಯಾರು ಮಾಡಿಕೊಂಡಿವೆ. ಹೊಸ ಸರ್ಕಾರದ ಮೊದಲ ಸಂಪೂರ್ಣ ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಬರೀ ಅಧಿವೇಶನ ಅಲ್ಲ, ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಹೊಸ ಸರ್ಕಾರದ ಮೊದಲ ಪರಿಪೂರ್ಣ ಬಜೆಟ್ ಮಂಡಿಸಲಿದ್ದಾರೆ.
16ನೇ ವಿಧಾನಸಭೆಯ ಮೊದಲ ಅಧಿವೇಶನ ಮಧ್ಯಾಹ್ನ 12 ಗಂಟೆಗೆ ಶುರುವಾಗಲಿದೆ. ಮೊಟ್ಟ ಮೊದಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಭಾಷಣ ಮಾಡುತ್ತಾರೆ. ಆಮೇಲೆ ನೂತನ ಶಾಸಕರಿಗೆ ಅಭಿನಂದನೆ, ಅಗಲಿದ ಗಣ್ಯರಿಗೆ ಸಂತಾಪ ಸೂಚನೆ. ಆಮೇಲೆ ಸಣ್ಣಪುಟ್ಟ ಚರ್ಚೆ ಮುಗಿಸಿ ಕಲಾಪ ಅಂತ್ಯವಾಗಲಿದೆ.
ಇಂದಿನಿಂದ ಜುಲೈ 14ರವರೆಗೆ ಕಲಾಪ ನಡೆಯಲಿದ್ದು, 2 ದಿನ ರಜೆ, 8 ದಿನ ಅಧಿವೇಶನ ನಡೆಯಲಿದೆ. ಸಿದ್ದರಾಮಯ್ಯ ಸರ್ಕಾರವನ್ನ ಕಟ್ಟಿಹಾಕುವ ಗಂಡುಗಲಿ ಯಾರು ಎಂದು ಇನ್ನೂ ನಿರ್ಧಾರ ಆಗಿಲ್ಲ. ಸರ್ಕಾರವನ್ನ ಕಟ್ಟಿ ಹಾಕಲು ಜೆಡಿಎಸ್, ಬಿಜೆಪಿ ಕೂಡ ಸರ್ವಸನ್ನದ್ಧವಾಗುತ್ತಿದೆ. ಜೆಡಿಎಸ್ ಅಂತೂ ಒಂದು ಹೆಜ್ಜೆ ಮುಂದಿಟ್ಟಿದ್ದು ಬೆಂಗಳೂರಿನ ಜೆ.ಪಿ ಭವನದಲ್ಲಿ ಶಾಸಕರ ಜೊತೆ ಸಭೆಯನ್ನೂ ನಡೆಸಿದ್ದಾರೆ.
ಇತ್ತ, ಸಿದ್ದರಾಮಯ್ಯ ಜುಲೈ 7ಕ್ಕೆ ಅಂದರೆ ಶುಕ್ರವಾರ ಬಜೆಟ್ ಮಂಡಿಸುತ್ತಾರೆ. ಆದರೆ ಬಜೆಟ್ ಲೆಕ್ಕಾಚಾರ ಅಷ್ಟು ಸುಲಭವಲ್ಲ. ಏಕೆಂದರೆ ಸಿದ್ದು ಸರ್ಕಾರಕ್ಕೆ ಸವಾಲುಗಳು ಸಾಕಷ್ಟಿವೆ. 16ನೇ ವಿಧಾನಸಭೆ ಅಧಿವೇಶನದಲ್ಲಿ ಸಿದ್ದರಾಮಯ್ಯ ಮಂಡಿಸ್ತಿರುವ 14ನೇ ಬಜೆಟ್ ಇದಾಗಿದ್ದು, ಮೊದಲು ಕೊಟ್ಟಿರುವ ಐದು ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರ್ಬೇಕಾದ ಅನಿವಾರ್ಯತೆ ಇದೆ.
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…