ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆಯೊಂದು ಪಡುಬಿದ್ರಿಯ ಉಚ್ಚಿಲದಲ್ಲಿ ಸೋಮವಾರ ನಡೆದಿದೆ.
ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ.
ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel