ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆಯೊಂದು ಪಡುಬಿದ್ರಿಯ ಉಚ್ಚಿಲದಲ್ಲಿ ಸೋಮವಾರ ನಡೆದಿದೆ.
ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ.
ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…