ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆಯೊಂದು ಪಡುಬಿದ್ರಿಯ ಉಚ್ಚಿಲದಲ್ಲಿ ಸೋಮವಾರ ನಡೆದಿದೆ.
ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ.
ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…