ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆಯೊಂದು ಪಡುಬಿದ್ರಿಯ ಉಚ್ಚಿಲದಲ್ಲಿ ಸೋಮವಾರ ನಡೆದಿದೆ.
ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ.
ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…