Advertisement
ಸುದ್ದಿಗಳು

ವಿಶೇಷ ಗಿಡಮೂಲಿಕೆ ಔಷಧಿಗಳನ್ನು ಸಂರಕ್ಷಿಸುವ ಪ್ರಯತ್ನಕ್ಕೆ ಕೈಹಾಕಿದ ಅರಣ್ಯ ಇಲಾಖೆ

Share

ಹಸಿರಿನಲ್ಲಿ ಉಸಿರಿದೆ ಅಂತ ಬಲ್ಲವರು ಬಹಳ ಹಿಂದೆಯೇ ಹೇಳಿದ್ದಾರೆ. ನಮ್ಮ ಆರೋಗ್ಯ ಸಮಸ್ಯೆಗಳಿಗೆ(Health problem) ಪ್ರಕೃತಿಯಲ್ಲೇ(Nature) ಔಷಧಿ(Medicine) ಇದೆ ಎನ್ನುವುದು ಕೂಡ ಇದರ ಒಳಾರ್ಥವಾಗಿದೆ. ಏನಾದರೂ ಹೆಚ್ಚು ಕಮ್ಮಿಯಾಗಿ ರೋಗ ರುಜಿನ ಬಂದರೂ ಅದಕ್ಕೆ ತಕ್ಕುದಾದ ನಾಟಿ ಔಷಧಿಗಳು ಇರುತ್ತಿದ್ದವು. ಈ ಔಷಧಿಗಳ ಪೈಕಿ ಶುಂಠಿ, ಕಾಳು ಮೆಣಸು, ಜೀರಿಗೆ, ಜಾಯಿಕಾಯಿ, ತುಳಸಿ, ಪುದೀನ, ಬೇವು, ಹೀಗೆ ನುರಾರು ಬಗೆಯ ಔಷಧೀಯ ಸಸ್ಯಗಳು(Medicinal Plant) ಸೇರಿವೆ. ಆದರೆ ಕಾಲ ಕ್ರಮೇಣ ಈ ಸಸ್ಯಗಳು ಅವನತಿಯ ಹಾದಿ ಹಿಡದವು. ಆಧುನಿಕ ವೈದ್ಯ ಪದ್ಧತಿ ನಮ್ಮ ಪಾರಂಪರಿಕ ಔಷಧ ಶಾಸ್ತ್ರವನ್ನ ನಗಣ್ಯವಾಗುವಂತೆ ಮಾಡಿದೆ. ಹಾಗಾಗಿ ನಮ್ಮ ಪಶ್ಚಿಮ ಘಟ್ಟದಲ್ಲಿರುವ(Western Ghats) ವಿಶೇಷ ಗಿಡಮೂಲಿಕೆ ಔಷಧಿಗಳನ್ನ ಪತ್ತೆಹಚ್ಚುವ ಸಂರಕ್ಷಿಸುವ(Saving) ಪ್ರಯತ್ನಕ್ಕೆ ಅರಣ್ಯ ಇಲಾಖೆ(Forest Department) ಮುಂದಾಗಿದೆ.

ಪಶ್ಚಿಮಘಟ್ಟ, ಕರಾವಳಿ, ಬಯಲು ಸೀಮೆಯ ವಿವಿಧ ಔಷಧಿಗಳು ಕಣ್ಮರೆಯಾಗುತ್ತಿವೆ. ಆಸ್ಪತ್ರೆಗಳೇ ಇಲ್ಲದ ದಿನಗಳಲ್ಲಿ ಈ ಔಷಧೀಯ ಸಸ್ಯಗಳೇ ಮಾನವನ ಆರೋಗ್ಯ ಕಾಪಾಡುತ್ತಿದ್ದವು. ಹಾಗಾಗಿ ಈ ಔಷಧೀಯ ಸಸ್ಯಗಳನ್ನು ಗುರುತಿಸುವಂತಹ, ಸಂರಕ್ಷಿಸುವಂತಹ ಮಹತ್ವದ ಕಾರ್ಯಕ್ಕೆ ಅರಣ್ಯ ಇಲಾಖೆ ಮತ್ತು ಔಷಧಿ ಪ್ರಾಧಿಕಾರ ಕೈ ಹಾಕಿದೆ.

ಕೊಡಗಿನವರಾದ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಈ ನಿಟ್ಟಿನಲ್ಲಿ ವಿಶೇಷ ಆಸಕ್ತಿವಹಿಸಿದ್ದಾರೆ. ಪಶ್ಚಿಮ ಘಟ್ಟ, ಕರಾವಳಿ ಮತ್ತು ಬಯಲು ಸೀಮೆಯ ವಿಶೇಷ ಔಷಧೀಯ ಸಸ್ಯಗಳನ್ನು ಗುರುತಿಸಿ ಅವುಗಳನ್ನು ಬೆಳೆಸುವ ಸಂರಕ್ಷಿಸುವ ಮತ್ತು ಔಷಧೀಯ ಉದ್ದೇಶಕ್ಕೆ ಪೂರೈಸುವ ಯೋಜನೆಗೆ ಕೈ ಹಾಕಿದ್ದಾರೆ. ಈಗಾಗಲೇ ಜಿಲ್ಲೆಗಳಲ್ಲಿ ಔಷಧೀಯ ಸಸ್ಯಗಳ ಕುರಿತು ಅರಿವು ಮೂಡಿಸುವ ಸಭೆ, ವಿಚಾರ ಸಂಕಿರಣಗಳನ್ನ ಆಯೋಜಿಸುತ್ತಿದ್ದಾರೆ.

ನಾಟಿ ಔಷಧಿ ಮತ್ತು ಔಷಧೀಯ ಸಸ್ಯಗಳ ಕುರಿತು ಮಾಹಿತಿ ಸಂಗ್ರಹಿಸುವುದು ಮತ್ತು ಸಂರಕ್ಷಿಸುವುದು ಅಷ್ಟು ಸುಲಭವಾಗಿಲ್ಲ. ಯಾಕಂದರೆ ನಾಟಿ ಔಷಧಿಗಳ ಗುಟ್ಟು ಬಿಟ್ಟು ಕೊಡಲು ನಾಟಿ ವಯದ್ಯರೇ ಸಿದ್ಧರಿರುವುದಿಲ್ಲ. ಅದು ಅಲ್ಲದೆ ಬಹಳಷ್ಟು ನಾಟಿ ವೈದ್ಯರು ಇಂದು ಜೀವಂತವಾಗಿಲ್ಲ. ಹಾಗಾಗಿ ಬಹಳಷ್ಟು ನಾಟಿ ಔಷಧಿಗಳು ಕೂಡ ಜನರ ಸಂಪರ್ಕ ಕಲೆದುಕೊಂಡಿದೆ. ಈ ಎಲ್ಲಾ ಸವಾಲುಗಳನ್ನ ಮೆಟ್ಟಿನಿಂತು ಜೀವವೈದ್ಯ ಮಂಡಳಿ ತನ್ನ ಪ್ರಯತ್ನದಲ್ಲಿ ಯಶಸ್ಸಾಗಲಿ ಎಂದು ಎಲ್ಲರು ಹಾರೈಸುತ್ತಿದ್ದಾರೆ.

ಗೋಪಾಲ್ ಸೋಮಯ್ಯ

ವಾಟ್ಸಪ್‌ ಮೂಲಕ ಬರೆದ ಬರಹವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

8 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

10 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

16 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago