Advertisement
ಸುದ್ದಿಗಳು

ವಿಶೇಷ ಗಿಡಮೂಲಿಕೆ ಔಷಧಿಗಳನ್ನು ಸಂರಕ್ಷಿಸುವ ಪ್ರಯತ್ನಕ್ಕೆ ಕೈಹಾಕಿದ ಅರಣ್ಯ ಇಲಾಖೆ

Share

ಹಸಿರಿನಲ್ಲಿ ಉಸಿರಿದೆ ಅಂತ ಬಲ್ಲವರು ಬಹಳ ಹಿಂದೆಯೇ ಹೇಳಿದ್ದಾರೆ. ನಮ್ಮ ಆರೋಗ್ಯ ಸಮಸ್ಯೆಗಳಿಗೆ(Health problem) ಪ್ರಕೃತಿಯಲ್ಲೇ(Nature) ಔಷಧಿ(Medicine) ಇದೆ ಎನ್ನುವುದು ಕೂಡ ಇದರ ಒಳಾರ್ಥವಾಗಿದೆ. ಏನಾದರೂ ಹೆಚ್ಚು ಕಮ್ಮಿಯಾಗಿ ರೋಗ ರುಜಿನ ಬಂದರೂ ಅದಕ್ಕೆ ತಕ್ಕುದಾದ ನಾಟಿ ಔಷಧಿಗಳು ಇರುತ್ತಿದ್ದವು. ಈ ಔಷಧಿಗಳ ಪೈಕಿ ಶುಂಠಿ, ಕಾಳು ಮೆಣಸು, ಜೀರಿಗೆ, ಜಾಯಿಕಾಯಿ, ತುಳಸಿ, ಪುದೀನ, ಬೇವು, ಹೀಗೆ ನುರಾರು ಬಗೆಯ ಔಷಧೀಯ ಸಸ್ಯಗಳು(Medicinal Plant) ಸೇರಿವೆ. ಆದರೆ ಕಾಲ ಕ್ರಮೇಣ ಈ ಸಸ್ಯಗಳು ಅವನತಿಯ ಹಾದಿ ಹಿಡದವು. ಆಧುನಿಕ ವೈದ್ಯ ಪದ್ಧತಿ ನಮ್ಮ ಪಾರಂಪರಿಕ ಔಷಧ ಶಾಸ್ತ್ರವನ್ನ ನಗಣ್ಯವಾಗುವಂತೆ ಮಾಡಿದೆ. ಹಾಗಾಗಿ ನಮ್ಮ ಪಶ್ಚಿಮ ಘಟ್ಟದಲ್ಲಿರುವ(Western Ghats) ವಿಶೇಷ ಗಿಡಮೂಲಿಕೆ ಔಷಧಿಗಳನ್ನ ಪತ್ತೆಹಚ್ಚುವ ಸಂರಕ್ಷಿಸುವ(Saving) ಪ್ರಯತ್ನಕ್ಕೆ ಅರಣ್ಯ ಇಲಾಖೆ(Forest Department) ಮುಂದಾಗಿದೆ.

ಪಶ್ಚಿಮಘಟ್ಟ, ಕರಾವಳಿ, ಬಯಲು ಸೀಮೆಯ ವಿವಿಧ ಔಷಧಿಗಳು ಕಣ್ಮರೆಯಾಗುತ್ತಿವೆ. ಆಸ್ಪತ್ರೆಗಳೇ ಇಲ್ಲದ ದಿನಗಳಲ್ಲಿ ಈ ಔಷಧೀಯ ಸಸ್ಯಗಳೇ ಮಾನವನ ಆರೋಗ್ಯ ಕಾಪಾಡುತ್ತಿದ್ದವು. ಹಾಗಾಗಿ ಈ ಔಷಧೀಯ ಸಸ್ಯಗಳನ್ನು ಗುರುತಿಸುವಂತಹ, ಸಂರಕ್ಷಿಸುವಂತಹ ಮಹತ್ವದ ಕಾರ್ಯಕ್ಕೆ ಅರಣ್ಯ ಇಲಾಖೆ ಮತ್ತು ಔಷಧಿ ಪ್ರಾಧಿಕಾರ ಕೈ ಹಾಕಿದೆ.

ಕೊಡಗಿನವರಾದ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಈ ನಿಟ್ಟಿನಲ್ಲಿ ವಿಶೇಷ ಆಸಕ್ತಿವಹಿಸಿದ್ದಾರೆ. ಪಶ್ಚಿಮ ಘಟ್ಟ, ಕರಾವಳಿ ಮತ್ತು ಬಯಲು ಸೀಮೆಯ ವಿಶೇಷ ಔಷಧೀಯ ಸಸ್ಯಗಳನ್ನು ಗುರುತಿಸಿ ಅವುಗಳನ್ನು ಬೆಳೆಸುವ ಸಂರಕ್ಷಿಸುವ ಮತ್ತು ಔಷಧೀಯ ಉದ್ದೇಶಕ್ಕೆ ಪೂರೈಸುವ ಯೋಜನೆಗೆ ಕೈ ಹಾಕಿದ್ದಾರೆ. ಈಗಾಗಲೇ ಜಿಲ್ಲೆಗಳಲ್ಲಿ ಔಷಧೀಯ ಸಸ್ಯಗಳ ಕುರಿತು ಅರಿವು ಮೂಡಿಸುವ ಸಭೆ, ವಿಚಾರ ಸಂಕಿರಣಗಳನ್ನ ಆಯೋಜಿಸುತ್ತಿದ್ದಾರೆ.

ನಾಟಿ ಔಷಧಿ ಮತ್ತು ಔಷಧೀಯ ಸಸ್ಯಗಳ ಕುರಿತು ಮಾಹಿತಿ ಸಂಗ್ರಹಿಸುವುದು ಮತ್ತು ಸಂರಕ್ಷಿಸುವುದು ಅಷ್ಟು ಸುಲಭವಾಗಿಲ್ಲ. ಯಾಕಂದರೆ ನಾಟಿ ಔಷಧಿಗಳ ಗುಟ್ಟು ಬಿಟ್ಟು ಕೊಡಲು ನಾಟಿ ವಯದ್ಯರೇ ಸಿದ್ಧರಿರುವುದಿಲ್ಲ. ಅದು ಅಲ್ಲದೆ ಬಹಳಷ್ಟು ನಾಟಿ ವೈದ್ಯರು ಇಂದು ಜೀವಂತವಾಗಿಲ್ಲ. ಹಾಗಾಗಿ ಬಹಳಷ್ಟು ನಾಟಿ ಔಷಧಿಗಳು ಕೂಡ ಜನರ ಸಂಪರ್ಕ ಕಲೆದುಕೊಂಡಿದೆ. ಈ ಎಲ್ಲಾ ಸವಾಲುಗಳನ್ನ ಮೆಟ್ಟಿನಿಂತು ಜೀವವೈದ್ಯ ಮಂಡಳಿ ತನ್ನ ಪ್ರಯತ್ನದಲ್ಲಿ ಯಶಸ್ಸಾಗಲಿ ಎಂದು ಎಲ್ಲರು ಹಾರೈಸುತ್ತಿದ್ದಾರೆ.

ಗೋಪಾಲ್ ಸೋಮಯ್ಯ

ವಾಟ್ಸಪ್‌ ಮೂಲಕ ಬರೆದ ಬರಹವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

6 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago