Advertisement
ಸುದ್ದಿಗಳು

ವಿಶೇಷ ಗಿಡಮೂಲಿಕೆ ಔಷಧಿಗಳನ್ನು ಸಂರಕ್ಷಿಸುವ ಪ್ರಯತ್ನಕ್ಕೆ ಕೈಹಾಕಿದ ಅರಣ್ಯ ಇಲಾಖೆ

Share

ಹಸಿರಿನಲ್ಲಿ ಉಸಿರಿದೆ ಅಂತ ಬಲ್ಲವರು ಬಹಳ ಹಿಂದೆಯೇ ಹೇಳಿದ್ದಾರೆ. ನಮ್ಮ ಆರೋಗ್ಯ ಸಮಸ್ಯೆಗಳಿಗೆ(Health problem) ಪ್ರಕೃತಿಯಲ್ಲೇ(Nature) ಔಷಧಿ(Medicine) ಇದೆ ಎನ್ನುವುದು ಕೂಡ ಇದರ ಒಳಾರ್ಥವಾಗಿದೆ. ಏನಾದರೂ ಹೆಚ್ಚು ಕಮ್ಮಿಯಾಗಿ ರೋಗ ರುಜಿನ ಬಂದರೂ ಅದಕ್ಕೆ ತಕ್ಕುದಾದ ನಾಟಿ ಔಷಧಿಗಳು ಇರುತ್ತಿದ್ದವು. ಈ ಔಷಧಿಗಳ ಪೈಕಿ ಶುಂಠಿ, ಕಾಳು ಮೆಣಸು, ಜೀರಿಗೆ, ಜಾಯಿಕಾಯಿ, ತುಳಸಿ, ಪುದೀನ, ಬೇವು, ಹೀಗೆ ನುರಾರು ಬಗೆಯ ಔಷಧೀಯ ಸಸ್ಯಗಳು(Medicinal Plant) ಸೇರಿವೆ. ಆದರೆ ಕಾಲ ಕ್ರಮೇಣ ಈ ಸಸ್ಯಗಳು ಅವನತಿಯ ಹಾದಿ ಹಿಡದವು. ಆಧುನಿಕ ವೈದ್ಯ ಪದ್ಧತಿ ನಮ್ಮ ಪಾರಂಪರಿಕ ಔಷಧ ಶಾಸ್ತ್ರವನ್ನ ನಗಣ್ಯವಾಗುವಂತೆ ಮಾಡಿದೆ. ಹಾಗಾಗಿ ನಮ್ಮ ಪಶ್ಚಿಮ ಘಟ್ಟದಲ್ಲಿರುವ(Western Ghats) ವಿಶೇಷ ಗಿಡಮೂಲಿಕೆ ಔಷಧಿಗಳನ್ನ ಪತ್ತೆಹಚ್ಚುವ ಸಂರಕ್ಷಿಸುವ(Saving) ಪ್ರಯತ್ನಕ್ಕೆ ಅರಣ್ಯ ಇಲಾಖೆ(Forest Department) ಮುಂದಾಗಿದೆ.

ಪಶ್ಚಿಮಘಟ್ಟ, ಕರಾವಳಿ, ಬಯಲು ಸೀಮೆಯ ವಿವಿಧ ಔಷಧಿಗಳು ಕಣ್ಮರೆಯಾಗುತ್ತಿವೆ. ಆಸ್ಪತ್ರೆಗಳೇ ಇಲ್ಲದ ದಿನಗಳಲ್ಲಿ ಈ ಔಷಧೀಯ ಸಸ್ಯಗಳೇ ಮಾನವನ ಆರೋಗ್ಯ ಕಾಪಾಡುತ್ತಿದ್ದವು. ಹಾಗಾಗಿ ಈ ಔಷಧೀಯ ಸಸ್ಯಗಳನ್ನು ಗುರುತಿಸುವಂತಹ, ಸಂರಕ್ಷಿಸುವಂತಹ ಮಹತ್ವದ ಕಾರ್ಯಕ್ಕೆ ಅರಣ್ಯ ಇಲಾಖೆ ಮತ್ತು ಔಷಧಿ ಪ್ರಾಧಿಕಾರ ಕೈ ಹಾಕಿದೆ.

ಕೊಡಗಿನವರಾದ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಈ ನಿಟ್ಟಿನಲ್ಲಿ ವಿಶೇಷ ಆಸಕ್ತಿವಹಿಸಿದ್ದಾರೆ. ಪಶ್ಚಿಮ ಘಟ್ಟ, ಕರಾವಳಿ ಮತ್ತು ಬಯಲು ಸೀಮೆಯ ವಿಶೇಷ ಔಷಧೀಯ ಸಸ್ಯಗಳನ್ನು ಗುರುತಿಸಿ ಅವುಗಳನ್ನು ಬೆಳೆಸುವ ಸಂರಕ್ಷಿಸುವ ಮತ್ತು ಔಷಧೀಯ ಉದ್ದೇಶಕ್ಕೆ ಪೂರೈಸುವ ಯೋಜನೆಗೆ ಕೈ ಹಾಕಿದ್ದಾರೆ. ಈಗಾಗಲೇ ಜಿಲ್ಲೆಗಳಲ್ಲಿ ಔಷಧೀಯ ಸಸ್ಯಗಳ ಕುರಿತು ಅರಿವು ಮೂಡಿಸುವ ಸಭೆ, ವಿಚಾರ ಸಂಕಿರಣಗಳನ್ನ ಆಯೋಜಿಸುತ್ತಿದ್ದಾರೆ.

ನಾಟಿ ಔಷಧಿ ಮತ್ತು ಔಷಧೀಯ ಸಸ್ಯಗಳ ಕುರಿತು ಮಾಹಿತಿ ಸಂಗ್ರಹಿಸುವುದು ಮತ್ತು ಸಂರಕ್ಷಿಸುವುದು ಅಷ್ಟು ಸುಲಭವಾಗಿಲ್ಲ. ಯಾಕಂದರೆ ನಾಟಿ ಔಷಧಿಗಳ ಗುಟ್ಟು ಬಿಟ್ಟು ಕೊಡಲು ನಾಟಿ ವಯದ್ಯರೇ ಸಿದ್ಧರಿರುವುದಿಲ್ಲ. ಅದು ಅಲ್ಲದೆ ಬಹಳಷ್ಟು ನಾಟಿ ವೈದ್ಯರು ಇಂದು ಜೀವಂತವಾಗಿಲ್ಲ. ಹಾಗಾಗಿ ಬಹಳಷ್ಟು ನಾಟಿ ಔಷಧಿಗಳು ಕೂಡ ಜನರ ಸಂಪರ್ಕ ಕಲೆದುಕೊಂಡಿದೆ. ಈ ಎಲ್ಲಾ ಸವಾಲುಗಳನ್ನ ಮೆಟ್ಟಿನಿಂತು ಜೀವವೈದ್ಯ ಮಂಡಳಿ ತನ್ನ ಪ್ರಯತ್ನದಲ್ಲಿ ಯಶಸ್ಸಾಗಲಿ ಎಂದು ಎಲ್ಲರು ಹಾರೈಸುತ್ತಿದ್ದಾರೆ.

ಗೋಪಾಲ್ ಸೋಮಯ್ಯ

ವಾಟ್ಸಪ್‌ ಮೂಲಕ ಬರೆದ ಬರಹವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

15 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

21 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

21 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago