MIRROR FOCUS

ಮರುಕಳಿಸಲಿದೆ ಮತ್ತೆ ಉದ್ಯಾನ ನಗರಿ ವೈಭವ | ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗ್ತಿದೆ ಮಿನಿ ಪಶ್ಚಿಮ ಘಟ್ಟ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಶ್ಚಿಮ ಘಟ್ಟ ಉಳಿಸಬೇಕು ಅನ್ನುವ ಕೂಗು ದಶಕಗಳ ಕಾಲದಿಂದ ಕೇಳಿ ಬರುತ್ತಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ ನಮ್ಮ ಹೆಮ್ಮೆಯ ಪ್ರಕೃತಿ ಕೊಡುಗೆಯನ್ನು ವಿನಾಶದತ್ತ ಕೊಂಡೊಯ್ಯುತ್ತಿದ್ದಾನೆ. ಪ್ರಕೃತಿದತ್ತವಾಗಿ ದೊರೆತ ಪಶ್ಚಿಮ ಘಟ್ಟವನ್ನು ಉಳಿಸಿಕೊಳ್ಳಲಾಗದ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ನಾಗರೀಕರು ಈಗ ಕೃತಕ ಪಶ್ಚಿಮ ಘಟ್ಟವನ್ನು ನಿರ್ಮಿಸಲು ಹೊರಟಿದ್ದಾರೆ. ಇದು ಸಂತಸದ ವಿಷಯವೇ.. ಆದರೆ ಮಾನವ ಹಾಗೂ ಪ್ರಾಣಿ ಕುಲಕ್ಕೆ, ಮುಂದಿನ ಪೀಳಿಗೆಗೆ ಜೀವ ಬಲವಾಗಿರುವ ಪಶ್ಚಿಮವನ್ನು ಉಳಿಸುವ ಕೆಲಸವನ್ನು ಮೊದಲು ಮಾಡಬೇಕಾಗಿದೆ. ಇದೀಗ ಈ ಎಲ್ಲಾ ಯೋಚನೆಗಳೂ ನಗರದಲ್ಲೂ ಜಾಗೃತಿಗೆ ಕಾರಣವಾಗಿದೆ.

Advertisement

ಬೆಂಗಳೂರಿನಲ್ಲಿ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾಗ್ತಿದೆ. ನಿಜಕ್ಕೂ ಶ್ಲಾಘಿಸಬೇಕಾದಂತ ಕೆಲಸವೇ. ಕಲುಷಿತಗೊಂಡಿರುವ ಬೆಂಗಳೂರಿನ ವಾತಾವರಣವನ್ನು ಸರಿ ದಾರಿಗೆ ತರಬೇಕಾದರೆ ಇಂಥದ್ದೊಂದು ಕಾರ್ಯ ಆಗಲೇ ಬೇಕಿದೆ. ಬೆಂಗಳೂರಿನಲ್ಲೇ ಪಶ್ಚಿಮ ಘಟ್ಟದ ಸೌಂದರ್ಯ ಸಿಗುವುದಾದರೆ ಅದು ನಿಜಕ್ಕೂ ಖುಷಿಯ ವಿಚಾರ. ಪಶ್ಚಿಮ ಘಟ್ಟದ ಸಸ್ಯಗಳು, ಜಲಪಾತ್, ನಿತ್ಯ ಹರಿದ್ವರ್ಣ ಕಾಡುಗಳನ್ನು ನೋಡಲು ಅದೆಷ್ಟೋ ಜನ ಅಲ್ಲಿಗೆ ಟ್ರಿಪ್ ಹೋಗ್ತಾರೆ. ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ತಾರೆ. ಬೆಂಗಳೂರಿನಲ್ಲೇ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾದ್ರೆ ಹೇಗೆ? ಹೌದು ಲಾಲ್‍ಬಾಗ್‍ನಲ್ಲಿ ಮಿನಿ ಪಶ್ಚಿಮ ಘಟ್ಟಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 6 ಎಕರೆ ಬಂಜರು ಭೂಮಿಯಲ್ಲಿ ಸಹ್ಯಾದ್ರಿ ಪ್ರದೇಶದಲ್ಲಿ ಬೆಳೆಯುವ ವಿವಿಧ ಜಾತಿಯ ಮರಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡು ವರ್ಷಗಳ ಹಿಂದೆ ಸಹ್ಯಾದ್ರಿ ಪ್ರದೇಶದಿಂದ 190 ಕ್ಕೂ ಹೆಚ್ಚು ಜಾತಿಯ ಸಸಿಗಳನ್ನು ತರಿಸಿ ನೆಡಲಾಗಿದೆ, ಅದರಲ್ಲಿ ಕೆಲವು ಹಣ್ಣಿನ ಗಿಡಗಳು ಸೇರಿದಂತೆ 132 ಗಿಡಗಳು ಉಳಿದುಕೊಂಡಿವೆ ಎಂದು ಜೀವವೈವಿಧ್ಯ ತಜ್ಞ ಕೇಶವ ಮೂರ್ತಿ ಹೇಳಿದ್ದಾರೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಪಶ್ಚಿಮ ಘಟ್ಟಗಳ 400 ಕ್ಕೂ ಹೆಚ್ಚು ಜಾತಿಯ ಗಿಡಗಳನ್ನು ಲಾಲ್‍ಬಾಗ್‍ನಲ್ಲಿ ನೆಡಲಾಗಿದೆ. ತೋಟಗಾರಿಕೆ ಇಲಾಖೆ ಸಿಬ್ಬಂದಿ ಮಣ್ಣಿನ ಫಲವತ್ತತೆ ಕುರಿತು ಕೆಲಸ ಮಾಡುತ್ತಿದ್ದು, ಮಂಗಳವಾರ ಸಹ್ಯಾದ್ರಿ ಬೆಟ್ಟದಿಂದ ತರಿಸಿದ್ದ 400 ಸಸಿಗಳನ್ನು ವಿದ್ಯಾರ್ಥಿ ಸ್ವಯಂಸೇವಕರ ನೆರವಿನಿಂದ ನೆಡಲಾಗಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಘಟ್ಟದ ಪೊದೆಗಳು, ಗಿಡಮೂಲಿಕೆಗಳ ಸಸ್ಯಗಳನ್ನು ಸೇರಿಸಲಾಗುವುದು ಎಂದು ತೋಟಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ.

Source : Indian Express

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

10 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

10 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

20 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

22 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

22 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago