MIRROR FOCUS

ಮರುಕಳಿಸಲಿದೆ ಮತ್ತೆ ಉದ್ಯಾನ ನಗರಿ ವೈಭವ | ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗ್ತಿದೆ ಮಿನಿ ಪಶ್ಚಿಮ ಘಟ್ಟ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಶ್ಚಿಮ ಘಟ್ಟ ಉಳಿಸಬೇಕು ಅನ್ನುವ ಕೂಗು ದಶಕಗಳ ಕಾಲದಿಂದ ಕೇಳಿ ಬರುತ್ತಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ ನಮ್ಮ ಹೆಮ್ಮೆಯ ಪ್ರಕೃತಿ ಕೊಡುಗೆಯನ್ನು ವಿನಾಶದತ್ತ ಕೊಂಡೊಯ್ಯುತ್ತಿದ್ದಾನೆ. ಪ್ರಕೃತಿದತ್ತವಾಗಿ ದೊರೆತ ಪಶ್ಚಿಮ ಘಟ್ಟವನ್ನು ಉಳಿಸಿಕೊಳ್ಳಲಾಗದ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ನಾಗರೀಕರು ಈಗ ಕೃತಕ ಪಶ್ಚಿಮ ಘಟ್ಟವನ್ನು ನಿರ್ಮಿಸಲು ಹೊರಟಿದ್ದಾರೆ. ಇದು ಸಂತಸದ ವಿಷಯವೇ.. ಆದರೆ ಮಾನವ ಹಾಗೂ ಪ್ರಾಣಿ ಕುಲಕ್ಕೆ, ಮುಂದಿನ ಪೀಳಿಗೆಗೆ ಜೀವ ಬಲವಾಗಿರುವ ಪಶ್ಚಿಮವನ್ನು ಉಳಿಸುವ ಕೆಲಸವನ್ನು ಮೊದಲು ಮಾಡಬೇಕಾಗಿದೆ. ಇದೀಗ ಈ ಎಲ್ಲಾ ಯೋಚನೆಗಳೂ ನಗರದಲ್ಲೂ ಜಾಗೃತಿಗೆ ಕಾರಣವಾಗಿದೆ.

Advertisement
Advertisement

ಬೆಂಗಳೂರಿನಲ್ಲಿ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾಗ್ತಿದೆ. ನಿಜಕ್ಕೂ ಶ್ಲಾಘಿಸಬೇಕಾದಂತ ಕೆಲಸವೇ. ಕಲುಷಿತಗೊಂಡಿರುವ ಬೆಂಗಳೂರಿನ ವಾತಾವರಣವನ್ನು ಸರಿ ದಾರಿಗೆ ತರಬೇಕಾದರೆ ಇಂಥದ್ದೊಂದು ಕಾರ್ಯ ಆಗಲೇ ಬೇಕಿದೆ. ಬೆಂಗಳೂರಿನಲ್ಲೇ ಪಶ್ಚಿಮ ಘಟ್ಟದ ಸೌಂದರ್ಯ ಸಿಗುವುದಾದರೆ ಅದು ನಿಜಕ್ಕೂ ಖುಷಿಯ ವಿಚಾರ. ಪಶ್ಚಿಮ ಘಟ್ಟದ ಸಸ್ಯಗಳು, ಜಲಪಾತ್, ನಿತ್ಯ ಹರಿದ್ವರ್ಣ ಕಾಡುಗಳನ್ನು ನೋಡಲು ಅದೆಷ್ಟೋ ಜನ ಅಲ್ಲಿಗೆ ಟ್ರಿಪ್ ಹೋಗ್ತಾರೆ. ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ತಾರೆ. ಬೆಂಗಳೂರಿನಲ್ಲೇ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾದ್ರೆ ಹೇಗೆ? ಹೌದು ಲಾಲ್‍ಬಾಗ್‍ನಲ್ಲಿ ಮಿನಿ ಪಶ್ಚಿಮ ಘಟ್ಟಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 6 ಎಕರೆ ಬಂಜರು ಭೂಮಿಯಲ್ಲಿ ಸಹ್ಯಾದ್ರಿ ಪ್ರದೇಶದಲ್ಲಿ ಬೆಳೆಯುವ ವಿವಿಧ ಜಾತಿಯ ಮರಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡು ವರ್ಷಗಳ ಹಿಂದೆ ಸಹ್ಯಾದ್ರಿ ಪ್ರದೇಶದಿಂದ 190 ಕ್ಕೂ ಹೆಚ್ಚು ಜಾತಿಯ ಸಸಿಗಳನ್ನು ತರಿಸಿ ನೆಡಲಾಗಿದೆ, ಅದರಲ್ಲಿ ಕೆಲವು ಹಣ್ಣಿನ ಗಿಡಗಳು ಸೇರಿದಂತೆ 132 ಗಿಡಗಳು ಉಳಿದುಕೊಂಡಿವೆ ಎಂದು ಜೀವವೈವಿಧ್ಯ ತಜ್ಞ ಕೇಶವ ಮೂರ್ತಿ ಹೇಳಿದ್ದಾರೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಪಶ್ಚಿಮ ಘಟ್ಟಗಳ 400 ಕ್ಕೂ ಹೆಚ್ಚು ಜಾತಿಯ ಗಿಡಗಳನ್ನು ಲಾಲ್‍ಬಾಗ್‍ನಲ್ಲಿ ನೆಡಲಾಗಿದೆ. ತೋಟಗಾರಿಕೆ ಇಲಾಖೆ ಸಿಬ್ಬಂದಿ ಮಣ್ಣಿನ ಫಲವತ್ತತೆ ಕುರಿತು ಕೆಲಸ ಮಾಡುತ್ತಿದ್ದು, ಮಂಗಳವಾರ ಸಹ್ಯಾದ್ರಿ ಬೆಟ್ಟದಿಂದ ತರಿಸಿದ್ದ 400 ಸಸಿಗಳನ್ನು ವಿದ್ಯಾರ್ಥಿ ಸ್ವಯಂಸೇವಕರ ನೆರವಿನಿಂದ ನೆಡಲಾಗಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಘಟ್ಟದ ಪೊದೆಗಳು, ಗಿಡಮೂಲಿಕೆಗಳ ಸಸ್ಯಗಳನ್ನು ಸೇರಿಸಲಾಗುವುದು ಎಂದು ತೋಟಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ.

Source : Indian Express

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

2 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

3 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

4 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

9 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

11 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

17 hours ago