Advertisement
MIRROR FOCUS

ಮರುಕಳಿಸಲಿದೆ ಮತ್ತೆ ಉದ್ಯಾನ ನಗರಿ ವೈಭವ | ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗ್ತಿದೆ ಮಿನಿ ಪಶ್ಚಿಮ ಘಟ್ಟ…!

Share

ಪಶ್ಚಿಮ ಘಟ್ಟ ಉಳಿಸಬೇಕು ಅನ್ನುವ ಕೂಗು ದಶಕಗಳ ಕಾಲದಿಂದ ಕೇಳಿ ಬರುತ್ತಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ ನಮ್ಮ ಹೆಮ್ಮೆಯ ಪ್ರಕೃತಿ ಕೊಡುಗೆಯನ್ನು ವಿನಾಶದತ್ತ ಕೊಂಡೊಯ್ಯುತ್ತಿದ್ದಾನೆ. ಪ್ರಕೃತಿದತ್ತವಾಗಿ ದೊರೆತ ಪಶ್ಚಿಮ ಘಟ್ಟವನ್ನು ಉಳಿಸಿಕೊಳ್ಳಲಾಗದ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ನಾಗರೀಕರು ಈಗ ಕೃತಕ ಪಶ್ಚಿಮ ಘಟ್ಟವನ್ನು ನಿರ್ಮಿಸಲು ಹೊರಟಿದ್ದಾರೆ. ಇದು ಸಂತಸದ ವಿಷಯವೇ.. ಆದರೆ ಮಾನವ ಹಾಗೂ ಪ್ರಾಣಿ ಕುಲಕ್ಕೆ, ಮುಂದಿನ ಪೀಳಿಗೆಗೆ ಜೀವ ಬಲವಾಗಿರುವ ಪಶ್ಚಿಮವನ್ನು ಉಳಿಸುವ ಕೆಲಸವನ್ನು ಮೊದಲು ಮಾಡಬೇಕಾಗಿದೆ. ಇದೀಗ ಈ ಎಲ್ಲಾ ಯೋಚನೆಗಳೂ ನಗರದಲ್ಲೂ ಜಾಗೃತಿಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾಗ್ತಿದೆ. ನಿಜಕ್ಕೂ ಶ್ಲಾಘಿಸಬೇಕಾದಂತ ಕೆಲಸವೇ. ಕಲುಷಿತಗೊಂಡಿರುವ ಬೆಂಗಳೂರಿನ ವಾತಾವರಣವನ್ನು ಸರಿ ದಾರಿಗೆ ತರಬೇಕಾದರೆ ಇಂಥದ್ದೊಂದು ಕಾರ್ಯ ಆಗಲೇ ಬೇಕಿದೆ. ಬೆಂಗಳೂರಿನಲ್ಲೇ ಪಶ್ಚಿಮ ಘಟ್ಟದ ಸೌಂದರ್ಯ ಸಿಗುವುದಾದರೆ ಅದು ನಿಜಕ್ಕೂ ಖುಷಿಯ ವಿಚಾರ. ಪಶ್ಚಿಮ ಘಟ್ಟದ ಸಸ್ಯಗಳು, ಜಲಪಾತ್, ನಿತ್ಯ ಹರಿದ್ವರ್ಣ ಕಾಡುಗಳನ್ನು ನೋಡಲು ಅದೆಷ್ಟೋ ಜನ ಅಲ್ಲಿಗೆ ಟ್ರಿಪ್ ಹೋಗ್ತಾರೆ. ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ತಾರೆ. ಬೆಂಗಳೂರಿನಲ್ಲೇ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾದ್ರೆ ಹೇಗೆ? ಹೌದು ಲಾಲ್‍ಬಾಗ್‍ನಲ್ಲಿ ಮಿನಿ ಪಶ್ಚಿಮ ಘಟ್ಟಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 6 ಎಕರೆ ಬಂಜರು ಭೂಮಿಯಲ್ಲಿ ಸಹ್ಯಾದ್ರಿ ಪ್ರದೇಶದಲ್ಲಿ ಬೆಳೆಯುವ ವಿವಿಧ ಜಾತಿಯ ಮರಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡು ವರ್ಷಗಳ ಹಿಂದೆ ಸಹ್ಯಾದ್ರಿ ಪ್ರದೇಶದಿಂದ 190 ಕ್ಕೂ ಹೆಚ್ಚು ಜಾತಿಯ ಸಸಿಗಳನ್ನು ತರಿಸಿ ನೆಡಲಾಗಿದೆ, ಅದರಲ್ಲಿ ಕೆಲವು ಹಣ್ಣಿನ ಗಿಡಗಳು ಸೇರಿದಂತೆ 132 ಗಿಡಗಳು ಉಳಿದುಕೊಂಡಿವೆ ಎಂದು ಜೀವವೈವಿಧ್ಯ ತಜ್ಞ ಕೇಶವ ಮೂರ್ತಿ ಹೇಳಿದ್ದಾರೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಪಶ್ಚಿಮ ಘಟ್ಟಗಳ 400 ಕ್ಕೂ ಹೆಚ್ಚು ಜಾತಿಯ ಗಿಡಗಳನ್ನು ಲಾಲ್‍ಬಾಗ್‍ನಲ್ಲಿ ನೆಡಲಾಗಿದೆ. ತೋಟಗಾರಿಕೆ ಇಲಾಖೆ ಸಿಬ್ಬಂದಿ ಮಣ್ಣಿನ ಫಲವತ್ತತೆ ಕುರಿತು ಕೆಲಸ ಮಾಡುತ್ತಿದ್ದು, ಮಂಗಳವಾರ ಸಹ್ಯಾದ್ರಿ ಬೆಟ್ಟದಿಂದ ತರಿಸಿದ್ದ 400 ಸಸಿಗಳನ್ನು ವಿದ್ಯಾರ್ಥಿ ಸ್ವಯಂಸೇವಕರ ನೆರವಿನಿಂದ ನೆಡಲಾಗಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಘಟ್ಟದ ಪೊದೆಗಳು, ಗಿಡಮೂಲಿಕೆಗಳ ಸಸ್ಯಗಳನ್ನು ಸೇರಿಸಲಾಗುವುದು ಎಂದು ತೋಟಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ.

Source : Indian Express

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago