ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.
ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್ಎಸ್ನಲ್ಲಿ 21 ಟಿಎಂಸಿ ನೀರಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…