ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.
ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್ಎಸ್ನಲ್ಲಿ 21 ಟಿಎಂಸಿ ನೀರಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…