ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.
ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್ಎಸ್ನಲ್ಲಿ 21 ಟಿಎಂಸಿ ನೀರಿದೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…