ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.
ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್ಎಸ್ನಲ್ಲಿ 21 ಟಿಎಂಸಿ ನೀರಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…