ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.
ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್ಎಸ್ನಲ್ಲಿ 21 ಟಿಎಂಸಿ ನೀರಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…