ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.
ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್ಎಸ್ನಲ್ಲಿ 21 ಟಿಎಂಸಿ ನೀರಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…