Advertisement
MIRROR FOCUS

ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

Share

ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್‌ಎಸ್‍ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.

ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್‍ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್‌ಎಸ್‍ನಲ್ಲಿ 21 ಟಿಎಂಸಿ ನೀರಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

8 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

24 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago