Advertisement
MIRROR FOCUS

#INDIA | ರಿಪಬ್ಲಿಕ್‌ ಆಫ್‌ ಭಾರತ್‌…! | ಭಾರತದ ಹೆಸರು ಬದಲಾಗುತ್ತಾ…? | ಚರ್ಚೆ ಹುಟ್ಟು ಹಾಕಿದ ಸಂದೇಶ

Share

ಕೇಂದ್ರ ಸರ್ಕಾರವು ದೇಶದ ಹೆಸರನ್ನು `ಇಂಡಿಯಾ’ ಬದಲಿಗೆ `ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಮರುನಾಮಕರಣ ಮಾಡುತ್ತದೆಯೇ..? ಹೀಗೊಂದು ಚರ್ಚೆ ಈಗ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

ಈ ನಡುವೆಯೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಟ್ವಿಟರ್ (ಎಕ್ಸ್) ಪೋಸ್ಟ್ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ. ಹೀಗಾಗಿ ಹೆಸರು ಬದಲಾವಣೆ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಚರ್ಚೆಯಲ್ಲಿ ಕೇಳಿಬಂದಿದೆ. ಸಂಸತ್‌ನಲ್ಲಿ ನಿರ್ಣಯ ಮಂಡನೆಗೆ ಸರ್ಕಾರ ಸಜ್ಜಾಗಿದೆ. ಈ ಮೂಲಕ ವಿಪಕ್ಷಗಳ ಒಕ್ಕೂಟಕ್ಕೆ ಠಕ್ಕರ್‌ ಕೊಡಲು ಕೇಂದ್ರ ಐಡಿಯಾ ಮಾಡಿದೆ ಎಂದು ಹೇಳಲಾಗುತ್ತಿದೆ.

ಇಂಡಿಯಾ ಬದಲು ದೇಶದ ಹೆಸರನ್ನು `ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಈ ಚರ್ಚೆ ಆರಂಭವಾಗಿತ್ತು. ಇದೀಗ   ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನದ ಘೋಷಣೆಯು ಮಾಧ್ಯಮಗಳು ಮತ್ತು ರಾಜಕೀಯ ವಲಯಗಳಲ್ಲಿ ಸಾಕಷ್ಟು ಸಂಚಲನವನ್ನು ಸೃಷ್ಟಿಸಿದೆ. ಹಲವರ ಪ್ರಕಾರ ಮಹಿಳಾ ಮೀಸಲಾತಿ ಮಸೂದೆ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ, ಏಕರೂಪ ನಾಗರಿಕ ಸಂಹಿತೆ , ಅಥವಾ ಪೂಜಾ ಸ್ಥಳಗಳ ಕಾಯಿದೆ, ವಕ್ಫ್‌ನಂತಹ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗಳ ಗುಂಪನ್ನು ಸರ್ಕಾರವು ತರಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿವೆ.

ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು  ‘ರಿಪಬ್ಲಿಕ್ ಆಫ್ ಭಾರತ್’ ಎಂದು ಟ್ವಿಟರ್‌ನಲ್ಲಿ , ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಬರೆದುಕೊಂಡಿದ್ದಾರೆ.

ದೇಶದ ಹೆಸರನ್ನೇ ಬದಲಾಯಿಸಲು ಸರ್ಕಾರ ಮುಂದಾಗಿದೆ ಎಂದು ಐಎನ್‌ಡಿಐಎ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

Source: News Agencies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

6 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

11 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

11 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

14 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

14 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

15 hours ago