Advertisement
Opinion

#BajeRoot | ಬಜೆ ಬೇರು ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳು ಹಲವಾರು | ಮನೆಮದ್ದಾಗಿ ಬಜೆ ಉಪಯೋಗ |

Share

ಬಜೆ ಸಸ್ಯ ಮಲೆನಾಡಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ . ಅಧಿಕ ನೀರನ್ನು ಹೀರಿಕೊಳ್ಳುವ ಈ ಸಸ್ಯ ಭದ್ರವಾಗಿ ಬೇರೂರುತ್ತದೆ. ಜೊತೆಗೆ, ಮನೆ ಮದ್ದಾಗಿ ಬಳಸುವ ಈ ಗಿಡ ಬಜೆ ಬೇರು ಎಂಬ ಹೆಸರಿನಿಂದ ಜನಪ್ರಿಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಔಷಧವಾಗಿ ಇದನ್ನು ಬಳಸುತ್ತಾರೆ. ರುಚಿಯಲ್ಲಿ ಸ್ವಲ್ಪ ಖಾರ. ಆದರೆ, ಇದರಿಂದ ಹೊರಹೊಮ್ಮುವ ಸುವಾಸನೆ ಬಹಳ ಪರಿಮಳ. ಬಜೆ.. ಈ ಬೇರು ಬಹಳ ಹಿಂದಿನಿಂದಲೂ ಔಷಧಿಯಾಗಿ ಬಳಕೆಯಾಗುತ್ತಿದೆ.

  • ಚಿಕ್ಕಮಕ್ಕಳಿಗೆ 1ಗುಂಜಿ ಪ್ರಮಾಣದ ಬೇರನ್ನು ಎದೆಹಾಲಲ್ಲಿ ತೇಯ್ದು ನೆಕ್ಕಿಸಿದರೆ ಮಾತು ಸ್ಪಷ್ಟವಾಗಿ ಬರುವುದು.
  • ಬಜೆಯನ್ನು ತೆಯ್ದು ಕಾಲು ಚಮಚದಷ್ಟು ಗಂಧ ಮಾಡಿ ಜೇನಿನೊಡನೆ ಸೇವಿಸಿದರೆ ಶೀತ ಕಫ ಕರಗುವುದು.
  • ಬಜೆಯ ಬೇರನ್ನು ತೇಯ್ದು ತಲೆಗೆ ಲೇಪಿಸಿದರೆ ತಲೆನೋವು ಕಡಿಮೆಯಾಗುವುದು.ಸಂಧಿವಾತದ ನೋವುಗಳಿಗೆ ಲೇಪಿಸುವುದರಿಂದ ನೋವು ಕಡಿಮೆಯಾಗುವುದು.
  • ಚಿಕ್ಕಮಕ್ಕಳಿಗೆ ಹೊಟ್ಟೆಯುಬ್ಬರ ಬೇದಿ ಕಾಣಿಸಿದಾಗ ಬಜೆ ತೇಯ್ದು ಹರಳೆಣ್ಣೆ ಬೆರೆಸಿ ಹೊಟ್ಟೆಯ ಮೇಲೆ ಹೊಕ್ಕಳಿನ ಸುತ್ತ ಲೇಪಿಸಬೇಕು.
  • ಬಜೆ ತೇಯ್ದು ಬೆಣ್ಣೆ/ತುಪ್ಪದಲ್ಲಿ ಬೆರೆಸಿ ಮಕ್ಕಳಿಗೆ ನೆಕ್ಕಿಸಿದರೆ ಬುದ್ಧಿಶಕ್ತಿ,ಜ್ಞಾಪಕಶಕ್ತಿ ಹೆಚ್ಚುವುದು ರೋಗನಿರೋಧಕ ಶಕ್ತಿ ಹೆಚ್ಚುವುದು(ಅಲ್ಪಪ್ರಮಾಣದಲ್ಲಿ)
  • ಬಜೆಯ ಸೇವನೆಯಿಂದ ಜಂತುಹುಳು ನಿವಾರಣೆಯಾಗುವುದು.
  • ಮಕ್ಕಳಿಗೆ ಹಲ್ಲು ಹುಟ್ಟುವಾಗ ಜ್ವರ ಕಾಣಿಸಿದರೆ ಚೂರು ಬಜೆ ತೇಯ್ದು ನೆಕ್ಕಿಸಿದರೆ ಜ್ವರ ಕಡಿಮೆಯಾಗುವುದು.
  • ಬಜೆಯ ಕಷಾಯ ಸೇವಿಸಿದರೆ ಮೂತ್ರಕೋಶದ ಕಲ್ಲು ಕರಗುವುದು.ಮೂತ್ರಬಂಧ ಸರಿಯಾಗುವುದು.
  • ಬಜೆಯ ಗಂಧ ಸೇವಿಸಿದರೆ ಕಂಠಶುದ್ಧಿಯಾಗುವುದು, ಉಗ್ಗು ನಿವಾರಣೆಯಾಗುವುದು,ಮೂಲವ್ಯಾಧಿ ಗುಣವಾಗುವುದು.(ಹಸುವಿನ ಹಾಲಲ್ಲಿ ತೇಯ್ದು ಜೇನಿನೊಡನೆ ಬೆರೆಸಿ ಸೇವಿಸಬೇಕು)
  • ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣವನ್ನು ಪ್ರತಿದಿನ 10 ಗ್ರಾಂನಷ್ಟು ಬೆಳಗ್ಗೆ ಜೇನಿನೊಡನೆ ಸೇವಿಸುವುದರಿಂದ ಮೂರ್ಛೆರೋಗ ಗುಣವಾಗುವುದು.(೧ತಿಂಗಳು)
  • ಪಾರ್ಶ್ವವಾಯು ಪೀಡಿತರಿಗೆ ಬಜೆ ಅರೆದು ಲೇಪಿಸಿದರೆ ಗುಣವಾಗುವುದು.
  • ಬಾಯಿಯ ದುರ್ಗಂಧ ಹೋಗಲು ಚೂರು ಬಜೆಬೇರನ್ನು ಅಗಿಯಬೇಕು.
  • ಇದು ವಾಂತಿ ನಿವಾರಕ, ಜಠರಸಮಸ್ಯೆ, ಹೊಟ್ಟೆನೋವು, ನರದೌರ್ಬಲ್ಯ, ಶ್ವಾಸನಾಳದ ಸೋಂಕು, ಆಮಶಂಕೆ, ಹಾವು ವಿಷಜಂತುಗಳ ಕಡಿತ ಮುಂತಾದವುಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆ.
  • ಮಹಿಳೆ ಪ್ರೆಗ್ನೆಂಟ್ ಆಗಿದ್ದು ತಿಳಿದ ಕೂಡಲೆ ಬಜೆಯ ಗಿಡ ವಿರುವ ಬೇರಿನಲ್ಲಿ ಬಂಗಾರದ ಸರಿಗೆ ತೂರಿಸಿ ಗುರುತು ಮಾಡಿಕೊಂಡು ಬೆಳೆಯಲು ಬಿಡಬೇಕು ಮಗುವಿನ ಜನನದ ನಂತರ ಗುರುತು ಮಾಡಿದ ಬೇರನ್ನು ಕಿತ್ತರೆ ಬಂಗಾರದ ಸರಿಗೆ ಬಜೆಯಲ್ಲಿ ಲೀನವಾಗಿ ಕರಗಿರುತ್ತದೆ.ಇದನ್ನು ಮಗುವಿಗೆ ಉಪಯೋಗ ಮಾಡಿದರೆ ಸ್ವರ್ಣ ಪ್ರಾಶನ ಪ್ರತ್ಯೇಕ ವಾಗಿ ಮಾಡುವ ಅಗತ್ಯ ಇರುವುದಿಲ್ಲ. ಇದು ತುಂಬಾ ಉಪಯುಕ್ತ ವಾದ ಔಷಧಿ.
  • ವಿಶೇಷ ಸೂಚನೆ ಬಜೆ ಅತಿಯಾದರೆ ಪಿತ್ತ ಹೆಚ್ಚಾಗುತ್ತದೆ.ಲೈಂಗಿಕ ಸಾಮರ್ಥ್ಯ ಕುಗ್ಗುತ್ತದೆ.
ಬರಹ :
ಸುಮನಾ ಮಳಲಗದ್ದೆ, ಪಾರಂಪರಿಕ ವೈದ್ಯರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

9 hours ago

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

18 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

18 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

19 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

19 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

19 hours ago