MIRROR FOCUS

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ(Rain) ಬಂದರೆ ಬೆಳೆ(Crop). ರೈತನ(Farmer) ಬದುಕು ಹಸನಾದರೆ ಮಾತ್ರವೇ ಸಮೃದ್ಧ. ಆದರೆ ಈ ಬಾರಿಯ ಭೀಕರ ಬರಗಾಲ(Drought) ರೈತರನ್ನು ಕೆಂಗೆಡಿಸಿದೆ. ಈ ಕಾರಣದಿಂದ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ರೈತರಿಗೂ ಫಸಲು ಕಡಿಮೆಯಾಗಿದೆ. ರೈತ ಬೆಳೆದ ಬೆಳೆಯೆಲ್ಲಾ ನೀರಿಲ್ಲದೆ, ಬಿಸಿಲಿನ ತಾಪಕ್ಕೆ(heat temperature) ಒಣಗಿ ಹೋಗಿದೆ. ಭೀಕರ ಬರಗಾಲದಿಂದ ಹಣ್ಣುಗಳ ರಾಜ ಎನಿಸಿಕೊಂಡಿರುವ ಮಾವು (Mangoes) ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ರಾಮನಗರ(Ramanagara) ಜಿಲ್ಲೆಯಲ್ಲಿ ಬರೋಬ್ಬರಿ 400ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಇತ್ತ ಹಾಕಿದ ಬಂಡವಾಳವೂ ಇಲ್ಲದೇ, ಹತ್ತಾರು ವರ್ಷಗಳಿಂದ ಬೆಳೆದಿದ್ದ ಮರಗಳೂ ಉಳಿಯದೇ ರೈತರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ.

Advertisement
Advertisement
ರೇಷ್ಮೆನಗರಿ ಎಂದು ಬಿರುದು ಪಡೆದ ರಾಮನಗರ ಹಣ್ಣಿನ ರಾಜ ಮಾವು ಬೆಳೆಯುವಲ್ಲೂ ಹೆಸರು ಮಾಡಿದೆ. ರಾಜ್ಯದಲ್ಲಿ ಮಾವಿನ ಸೀಸನ್ ಶುರುವಾಗೋದು ಇಲ್ಲಿಂದಲೇ. ಅತ್ಯಂತ ಉತ್ಕೃಷ್ಟ ಹಾಗೂ ವಿವಿಧ ತಳಿಯ ಮಾವನ್ನು ವಿದೇಶಕ್ಕೆ ರಫ್ತು ಮಾಡುವ ಇತಿಹಾಸ ಈ ಜಿಲ್ಲೆಗಿದೆ. ಈ ಬಾರಿ ಮಾವು ಬೆಳೆಯ ಇತಿಹಾಸದಲ್ಲೇ ಕಂಡು ಕೇಳರಿಯದ ಬರದಿಂದ ಮಾವು ಬೆಳೆ ನೆಲಕಚ್ಚಿದೆ. ಸೀಸನ್‍ನಲ್ಲಿ ಸುಮಾರು 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಉತ್ಪಾದನೆ ಆಗುತ್ತಿದ್ದ ಮಾವು ಈ ಬಾರಿ ಕೆಲವೇ ಕೆಲವು ಟನ್‍ಗಳಿಗೆ ಮಾತ್ರ ಸೀಮಿತವಾಗಿದೆ. ಮಾವು ಬೆಳೆದ ರೈತರ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಪಮಾನ ಏರಿಕೆಯಿಂದಾಗಿ ಮರದಲ್ಲಿ ಕಾಯಿಗಟ್ಟ ಬೇಕಿದ್ದ ಹೂಗಳು, ಸಣ್ಣ ಕಾಯಿಗಳು ಬಿಸಿಲಿನ ಝಳಕ್ಕೆ ಉದುರಿ ಹೋಗುತ್ತಿವೆ. ಜೊತೆಗೆ ಕೀಟಗಳ ಸಮಸ್ಯೆ ಸಹ ಮಾವಿಗೆ ಆವರಿಸಿದೆ.

ಜಿಲ್ಲೆಯಲ್ಲಿ ಒಟ್ಟು 30 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಮಾವು ಬೆಳೆಯಲಾಗುತ್ತಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿನ ತೀವ್ರ ತಾಪಮಾನದಿಂದ ಹೂಗಳೆಲ್ಲ ಉದುರಿ 90% ಇಳುವರಿ ಕುಸಿದಿದ್ದು 10% ರಷ್ಟು ಮಾತ್ರ ಇಳುವರಿಯಾಗಿದೆ. ಅದೂ ಕೂಡಾ ಬಿಸಿಲಿಗೆ ಒಣಗಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲೂ ಕೊಂಡುಕೊಳ್ಳುವವರಿಲ್ಲದೇ ಬೇಡಿಕೆ ಕುಸಿತ ಕಂಡಿದೆ.

ಈ ಬಗ್ಗೆ ಸಮೀಕ್ಷೆ ಮಾಡಿರುವ ಜಿಲ್ಲಾಡಳಿತ 400ಕೋಟಿ ರೂ. ಮೌಲ್ಯದ ಮಾವು ಬೆಳೆ ನಾಶ ಆಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೂ ಮಾವು ಬೆಳೆಗೆ ವಿಮೆ ನೀಡಲು ವಿಮಾ ಕಂಪನಿಗಳು ಹಿಂದೇಟು ಹಾಕಿವೆ. ಉಷ್ಣಾಂಶದಿಂದ ಬೆಳೆ ನಾಶವಾಗಿರೋದಕ್ಕೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿರುವುದು ಮಾವು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಾರಣಾಸಿ ಎಂಬ ದ್ವಂದ್ವಗಳ ನಗರ

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…

7 minutes ago

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

21 minutes ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

29 minutes ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

3 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

6 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

6 hours ago