ಮಳೆ(Rain) ಬಂದರೆ ಬೆಳೆ(Crop). ರೈತನ(Farmer) ಬದುಕು ಹಸನಾದರೆ ಮಾತ್ರವೇ ಸಮೃದ್ಧ. ಆದರೆ ಈ ಬಾರಿಯ ಭೀಕರ ಬರಗಾಲ(Drought) ರೈತರನ್ನು ಕೆಂಗೆಡಿಸಿದೆ. ಈ ಕಾರಣದಿಂದ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ರೈತರಿಗೂ ಫಸಲು ಕಡಿಮೆಯಾಗಿದೆ. ರೈತ ಬೆಳೆದ ಬೆಳೆಯೆಲ್ಲಾ ನೀರಿಲ್ಲದೆ, ಬಿಸಿಲಿನ ತಾಪಕ್ಕೆ(heat temperature) ಒಣಗಿ ಹೋಗಿದೆ. ಭೀಕರ ಬರಗಾಲದಿಂದ ಹಣ್ಣುಗಳ ರಾಜ ಎನಿಸಿಕೊಂಡಿರುವ ಮಾವು (Mangoes) ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ರಾಮನಗರ(Ramanagara) ಜಿಲ್ಲೆಯಲ್ಲಿ ಬರೋಬ್ಬರಿ 400ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಇತ್ತ ಹಾಕಿದ ಬಂಡವಾಳವೂ ಇಲ್ಲದೇ, ಹತ್ತಾರು ವರ್ಷಗಳಿಂದ ಬೆಳೆದಿದ್ದ ಮರಗಳೂ ಉಳಿಯದೇ ರೈತರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ.
ಜಿಲ್ಲೆಯಲ್ಲಿ ಒಟ್ಟು 30 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಮಾವು ಬೆಳೆಯಲಾಗುತ್ತಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿನ ತೀವ್ರ ತಾಪಮಾನದಿಂದ ಹೂಗಳೆಲ್ಲ ಉದುರಿ 90% ಇಳುವರಿ ಕುಸಿದಿದ್ದು 10% ರಷ್ಟು ಮಾತ್ರ ಇಳುವರಿಯಾಗಿದೆ. ಅದೂ ಕೂಡಾ ಬಿಸಿಲಿಗೆ ಒಣಗಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲೂ ಕೊಂಡುಕೊಳ್ಳುವವರಿಲ್ಲದೇ ಬೇಡಿಕೆ ಕುಸಿತ ಕಂಡಿದೆ.
ಈ ಬಗ್ಗೆ ಸಮೀಕ್ಷೆ ಮಾಡಿರುವ ಜಿಲ್ಲಾಡಳಿತ 400ಕೋಟಿ ರೂ. ಮೌಲ್ಯದ ಮಾವು ಬೆಳೆ ನಾಶ ಆಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೂ ಮಾವು ಬೆಳೆಗೆ ವಿಮೆ ನೀಡಲು ವಿಮಾ ಕಂಪನಿಗಳು ಹಿಂದೇಟು ಹಾಕಿವೆ. ಉಷ್ಣಾಂಶದಿಂದ ಬೆಳೆ ನಾಶವಾಗಿರೋದಕ್ಕೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿರುವುದು ಮಾವು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…