ಮಳೆ(Rain) ಬಂದರೆ ಬೆಳೆ(Crop). ರೈತನ(Farmer) ಬದುಕು ಹಸನಾದರೆ ಮಾತ್ರವೇ ಸಮೃದ್ಧ. ಆದರೆ ಈ ಬಾರಿಯ ಭೀಕರ ಬರಗಾಲ(Drought) ರೈತರನ್ನು ಕೆಂಗೆಡಿಸಿದೆ. ಈ ಕಾರಣದಿಂದ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ರೈತರಿಗೂ ಫಸಲು ಕಡಿಮೆಯಾಗಿದೆ. ರೈತ ಬೆಳೆದ ಬೆಳೆಯೆಲ್ಲಾ ನೀರಿಲ್ಲದೆ, ಬಿಸಿಲಿನ ತಾಪಕ್ಕೆ(heat temperature) ಒಣಗಿ ಹೋಗಿದೆ. ಭೀಕರ ಬರಗಾಲದಿಂದ ಹಣ್ಣುಗಳ ರಾಜ ಎನಿಸಿಕೊಂಡಿರುವ ಮಾವು (Mangoes) ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ರಾಮನಗರ(Ramanagara) ಜಿಲ್ಲೆಯಲ್ಲಿ ಬರೋಬ್ಬರಿ 400ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಇತ್ತ ಹಾಕಿದ ಬಂಡವಾಳವೂ ಇಲ್ಲದೇ, ಹತ್ತಾರು ವರ್ಷಗಳಿಂದ ಬೆಳೆದಿದ್ದ ಮರಗಳೂ ಉಳಿಯದೇ ರೈತರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ.
ಜಿಲ್ಲೆಯಲ್ಲಿ ಒಟ್ಟು 30 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಮಾವು ಬೆಳೆಯಲಾಗುತ್ತಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿನ ತೀವ್ರ ತಾಪಮಾನದಿಂದ ಹೂಗಳೆಲ್ಲ ಉದುರಿ 90% ಇಳುವರಿ ಕುಸಿದಿದ್ದು 10% ರಷ್ಟು ಮಾತ್ರ ಇಳುವರಿಯಾಗಿದೆ. ಅದೂ ಕೂಡಾ ಬಿಸಿಲಿಗೆ ಒಣಗಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲೂ ಕೊಂಡುಕೊಳ್ಳುವವರಿಲ್ಲದೇ ಬೇಡಿಕೆ ಕುಸಿತ ಕಂಡಿದೆ.
ಈ ಬಗ್ಗೆ ಸಮೀಕ್ಷೆ ಮಾಡಿರುವ ಜಿಲ್ಲಾಡಳಿತ 400ಕೋಟಿ ರೂ. ಮೌಲ್ಯದ ಮಾವು ಬೆಳೆ ನಾಶ ಆಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೂ ಮಾವು ಬೆಳೆಗೆ ವಿಮೆ ನೀಡಲು ವಿಮಾ ಕಂಪನಿಗಳು ಹಿಂದೇಟು ಹಾಕಿವೆ. ಉಷ್ಣಾಂಶದಿಂದ ಬೆಳೆ ನಾಶವಾಗಿರೋದಕ್ಕೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿರುವುದು ಮಾವು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…